ದೆಹಲಿಯಲ್ಲೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಚರ್ಚೆ?

ದೆಹಲಿಯಲ್ಲೂ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಠಿ ಬಗ್ಗೆ ಚರ್ಚೆ?

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಯೊಳಗೆ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಠಿಸುವ ಬಗ್ಗೆ ಹೈಕಮಾಂಡ್ ಗಮನ ಸೆಳೆಯುವ ಪ್ರಯತ್ನವನ್ನು ರಾಜ್ಯ ನಾಯಕರು ಮಾಡಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾದ ಸಚಿವರಾದ ಕೆ.ಎನ್ ರಾಜಣ್ಣ, ಸತೀಶ್ ಜಾರಕಿಹೋಳಿ, ಹೆಚ್‌‌ಸಿ ಮಹದೇವಪ್ಪ ಈ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.

ಸಂವಿಧಾನ ಜಾರಿಯಾಗಿ 75 ವರ್ಷ ಕಳೆದ ಹಿನ್ನೆಲೆ ಕರ್ನಾಟಕ ಸರ್ಕಾರದ ವತಿಯಿಂದ ಫೆಬ್ರವರಿ 24 ಮತ್ತು 25 ರಂದು ಎರಡು ದಿನಗಳ ಕಾಲ ಅಂತಾರಾಷ್ಟ್ರೀಯ ಸಮ್ಮೇಳನ ಆಯೋಜನೆ ಮಾಡಲಾಗಿದ್ದು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಆಹ್ವಾನಿಸಲು ಸಚಿವರು ತೆರಳಿದ್ದರು.

ದೆಹಲಿಯಲ್ಲಿ ಖರ್ಗೆ ನಿವಾಸದಲ್ಲಿ ಭೇಟಿಯಾದ ನಾಯಕರು ಆಹ್ವಾನ ನೀಡಿದ ಬಳಿಕ ಲೋಕಸಭೆ ಚುನಾವಣೆ ಪೂರಕವಾಗಿ ವಿವಿಧ ಸಮುದಾಯಗಳಿಗೂ ಡಿಸಿಎಂ ಸ್ಥಾನಗಳನ್ನು ನೀಡಬೇಕು ಇದರಿಂದ ಪಕ್ಷಕ್ಕೆ ಹೆಚ್ಚು ಲಾಭವಾಗಲಿದೆ. ನಿಮ್ಮ ಗಮನಕ್ಕೆ ತಂದಿದ್ದೇವೆ ಅಂತಿಮ‌ ನಿರ್ಧಾರ ನಿಮ್ಮದು ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಖರ್ಗೆ ಅವರು ಯಾವುದೇ ಪೂರಕ ಪ್ರತಿಕ್ರಿಯೆ ನೀಡಿಲ್ಲ ಎಂದು ತಿಳಿದು ಬಂದಿದೆ.

Previous Post
ಚುನಾವಣಾ ಆಯುಕ್ತರ ಕಾಯ್ದೆ ಜಾರಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್‌
Next Post
ಸಂಕ್ರಾಂತಿಗೆ ಸಿಹಿ ಸುದ್ದಿ: 6 ದಿನದಿಂದ ಚಿನ್ನ ದರ ಇಳಿಕೆ, ಜ.12ರ ಚಿನ್ನ-ಬೆಳ್ಳಿ ದರ ಪಟ್ಟಿ, ಮಾಹಿತಿ

Recent News