ನೂರಾರು ಜೆಡಿಎಸ್ ನಾಯಕರು ನಮ್ಮ ಸಂಪರ್ಕ ದಲ್ಲಿದ್ದಾರೆ ಬೃಹತ್ ಸಮಾವೇಶ ನಡೆಸಿ ಸೇರ್ಪಡೆ – ಜಮೀರ್ ಅಹಮದ್ ಖಾನ್

ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಜಮೀರ್ ಅಹಮದ್ ಖಾನ್ ಅವರ ಸಲಹೆ ಯಂತೆ ಅವರ ಮಾರ್ಗದರ್ಶನ ದಲ್ಲೇ ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಜೆಡಿಎಸ್ ನಿಂದ ನಮ್ಮ ತತ್ವ ಸಿದ್ದಾಂತ ಒಪ್ಪಿ ಬರುವವರನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು. ಸಚಿವ, ರಾಮಲಿಂಗಾರೆಡ್ಡಿ, ಸಂಸದ ಡಿ. ಕೆ. ಸುರೇಶ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

ನೂರಾರು ಜೆಡಿಎಸ್ ನಾಯಕರು ನಮ್ಮ ಸಂಪರ್ಕ ದಲ್ಲಿದ್ದಾರೆ ಬೃಹತ್ ಸಮಾವೇಶ ನಡೆಸಿ ಸೇರ್ಪಡೆ – ಜಮೀರ್ ಅಹಮದ್ ಖಾನ್ಬೆಂ ಗಳೂರು : ಬಿಜೆಪಿ ಜತೆ ಜೆಡಿಎಸ್ ಮೈತ್ರಿಯಿಂದ ರಾಮನಗರ, ಚನ್ನಪಟ್ಟಣ, ಹಾಸನ, ಮಂಡ್ಯ ಸಹಿತ ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಅಲ್ಪಸಂಖ್ಯಾತರು ಸೇರಿ ಜಾತ್ಯತೀತ ಮನೋಭಾವವುಳ್ಳ ಮುಖಂಡರು ಬೇಸರಗೊಂಡು ನಮ್ಮ ಸಂಪರ್ಕ ದಲ್ಲಿದ್ದು ಅರಮನೆ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿದ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಚನ್ನಪಟ್ಟಣ ಮಾಜಿ ಶಾಸಕ ಅಶ್ವತ್, ಹಾಗೂ ಜಬಿ, ಜಿಯಾಜಿಲ್ಲಾಖಾನ್ ಸೇರಿದಂತೆ ನೂರಾರು ಮುಖಂಡರನ್ನು ಸ್ವಾಗತಿಸಿ ಮಾತನಾಡಿದ ಅವರು, ಹಾಲಿ ಹಾಗೂ ಮಾಜಿ ಶಾಸಕರು, ಪಾಲಿಕೆ ಸದಸ್ಯರು ಸೇರಿ ಸಾವಿರಾರು ಮುಖಂಡರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಹೇಳಿದರು.
ದೇವೇಗೌಡರು ಈಗಲೂ ಸೆಕ್ಯುಲರ್ ಆಗಲೂ ಸೆಕ್ಯುಲರ್. ಅವರಿಂದ ನಮ್ಮ ಸಮಾಜಕ್ಕೆ ನ್ಯಾಯ ಸಿಕ್ಕಿದೆ,ಎರಡನೇ ಹಂತದ ನಾಯಕರನ್ನೂ ಬೆಳೆಸಿದ್ದಾರೆ. ಆದರೆ ಕುಮಾರಸ್ವಾಮಿ ಸೆಕ್ಯುಲರ್ ಅಲ್ಲ. ಮುಸ್ಲಿಂ ಸಮುದಾಯದ ಮತ ನನಗೆ ಅನಿವಾರ್ಯ ವಾಗಿ ಹಾಕಿದರು ಎಂದು ಹೇಳಿರುವುದು ನೋವು ತಂದಿದೆ ಎಂ ಅವರು ಗೆದ್ದಿದ್ದು 12 ಸಾವಿರ ಮತ ಅಂತರದಿಂದ, ಡಿ. ಕೆ. ಶಿವಕುಮಾರ್ ಅವರಂತೆ 1.20 ಸಾವಿರ ಮತ ಅಂತರದಿಂದ ಅಲ್ಲ. ಮುಸ್ಲಿಂ ಸಮುದಾಯ ಮತ ಕೊಡದಿದ್ದರೆ ಏನಾಗುತ್ತಿತ್ತು ಎಂಬುದು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಎಚ್. ಡಿ. ಕುಮಾರಸ್ವಾಮಿ ಅವರ ಎಲ್ಲ ವಿದ್ಯೆ ನೋಡಿದ್ದೆ ಆದರೆ ಪ್ಯಾಂಟ್ ಒಳಗೆ ಆರ್ ಎಸ್ ಎಸ್ ಚಡ್ಡಿ ಹಾಕಿದ್ದು ಗೊತ್ತಿರಲಿಲ್ಲ ಎಂದು ಲೇವಡಿ ಮಾಡಿದರು.

Previous Post
ಕೆಪಿಸಿಸಿ ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು
Next Post
ಕೋವಿಡ್ಲಸಿಕೆ ಅಭಿವೃದ್ಧಿಪಡಿಸಿದ ವಿಜ್ಞಾನಿಗಳಿಗೆ ನೋಬೆಲ್ಪುರಸ್ಕಾರ

Recent News