ಸಚಿವ ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳ ಸಮಿತಿ ರಚನೆ ಉದ್ಯಮಿಗಳ ಜೊತೆ ಚರ್ಚಿಸಿ ಉದ್ಯೋಗ ಸೃಷ್ಟಿಸಲಿರುವ ಸಮಿತಿ

ಸಚಿವ ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ಉದ್ಯೋಗ ಮೇಳ ಸಮಿತಿ ರಚನೆ ಉದ್ಯಮಿಗಳ ಜೊತೆ ಚರ್ಚಿಸಿ ಉದ್ಯೋಗ ಸೃಷ್ಟಿಸಲಿರುವ ಸಮಿತಿ

ಬೆಂಗಳೂರು,ಜ.19- ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸುವ ಸಂಬಂಧ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ, ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧ್ಯಕ್ಷತೆಯಲ್ಲಿ ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ.

ಕಳೆದ ಜ.12ರಂದು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿತ್ತು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ವಿಶೇಷ ಆಸಕ್ತಿ ವಹಿಸಿ ಉದ್ಯೋಗ ಮೇಳ ಸಮಿತಿಯನ್ನು ಅವರ ಅಧ್ಯಕ್ಷತೆಯಲ್ಲೇ ರಚಿಸಿದ್ದಾರೆ.

ಈ ಸಮಿತಿಯು ರಾಜ್ಯ, ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದಲ್ಲಿ ಬೃಹತ್, ಸಣ್ಣ ಕೈಗಾರಿಕೆ, ಸಾಫ್ಟ್ವೇರ್ ಉದ್ಯಮಿಗಳ ಸಹಯೋಗದೊಂದಿಗೆ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಿದೆ. ಬೇಡಿಕೆಗೆ ಅನುಗುಣವಾಗಿ ಯುವ ಜನತೆಗೆ ಉದ್ಯೋಗಗಳನ್ನು ನೀಡಿ ಸ್ವಾವಲಂಬಿಯನ್ನಾಗಿ ಮಾಡುವ ಸದುದ್ದೇಶದಿಂದ ರಾಜ್ಯ ಸರ್ಕಾರ ಉದ್ಯೋಗ ಮೇಳವನ್ನು ಆಯೋಜಿಸಲು ಮುಂದಾಗಿದೆ.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಬೃಹತ್ ಉದ್ಯೋಗ ಮೇಳ ನಡೆಸುವ ಗುರಿ ಹೊಂದಲಾಗಿದೆ. ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಸರ್ಕಾರದಿಂದಲೇ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಸರ್ಕಾರಿ, ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ಈಗಾಗಲೇ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿದ್ದಾರೆ.

ಉದ್ಯೋಗ ಮೇಳ ನಡೆಸುವುದರಿಂದ ಐಟಿ- ಬಿಟಿ, ಹೋಟೆಲ್, ಉತ್ಪಾದನಾ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ- ಯುವತಿಯರಿಗೆ ಹೆಚ್ಚಿನ ಅವಕಾಶ ಸಿಗಲಿದೆ.

ಸಮಿತಿ ಸದಸ್ಯರು :
* ಡಾ.ಶರಣಪ್ರಕಾಶ್ ಪಾಟೀಲ್ – ಅಧ್ಯಕ್ಷರು
* ಎಂ.ಬಿ.ಪಾಟೀಲ್-ಸದಸ್ಯರು
* ಎಚ್.ಕೆ.ಪಾಟೀಲ್ -ಸದಸ್ಯರು
* ಡಾ.ಎಂ.ಸಿ.ಸುಧಾಕರ್ -ಸದಸ್ಯರು
* ದಿನೇಶ್ ಗುಂಡೂರಾವ್- ಸದಸ್ಯರು
* ಪ್ರಿಯಾಂಕ ಖರ್ಗೆ -ಸದಸ್ಯರು
* ಸಂತೋಷ್.ಎಸ್ ಲಾಡ್ – ಸದಸ್ಯರು
* ಬಿ.ನಾಗೇಂದ್ರ -ಸದಸ್ಯರು
* ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು( ಕೌಶಲ್ಯಾಭಿವೃದ್ಧಿಘಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ )- ಸದಸ್ಯರು
* ಸರ್ಕಾರದ ಪ್ರಧಾನ ಕಾರ್ಯದರ್ಶಿ( ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ) -ಸದಸ್ಯರು
* ಸರ್ಕಾರದ ಪ್ರಧಾನ ಕಾರ್ಯದರ್ಶಿ(ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ)- ಸದಸ್ಯರು
* ಸರ್ಕಾರದ ಪ್ರಧಾನ ಕಾರ್ಯದರ್ಶಿ( ಕಾರ್ಮಿಕ ಇಲಾಖೆ) – ಸದಸ್ಯರು
* ಸರ್ಕಾರದ ಪ್ರಧಾನ ಕಾರ್ಯದರ್ಶಿ(ಪ್ರವಾಸೋದ್ಯಮ ಇಲಾಖೆ) – ಸದಸ್ಯರು
* ಸರ್ಕಾರದ ಪ್ರಧಾನ ಕಾರ್ಯದರ್ಶಿ( ಉನ್ನತ ಶಿಕ್ಷಣ ಇಲಾಖೆ) -ಸದಸ್ಯರು
* ಆಯುಕ್ತರು( ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ) – ಸದಸ್ಯರು
* ವ್ಯವಸ್ಥಾಪಕ ನಿರ್ದೇಶಕರು(ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ) -ಸದಸ್ಯರು ಕಾರ್ಯದರ್ಶಿ
* ಅಭಿಯಾನ ನಿರ್ದೇಶಕರು (ರಾಷ್ಟ್ರೀಯ ಜೀವನೋಪಾಯ ಅಭಿಯಾನ-ನಗರ ಮತ್ತು ಗ್ರಾಮೀಣ) -ಸದಸ್ಯರು
* ವ್ಯವಸ್ಥಾಪಕ ನಿರ್ದೇಶಕರು(ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ) -ಸದಸ್ಯರು
* ನಿರ್ದೇಶಕರು(ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ) – ಸದಸ್ಯರು

Previous Post
ದಾವೋಸ್: ಎನ್.ಟಿ.ಟಿ. ಡೇಟಾದಿಂದ 2 ಬಿಲಿಯನ್ ಡಾಲರ್, ಆ್ಯಬ್ ಸಮೂಹದಿಂದ 400 ಕೋಟಿ ರೂ. ಹೂಡಿಕೆಗೆ ಅಸ್ತು
Next Post
‘ಸಾವಿರಾರು ಕುಟುಂಬಗಳ ಸಂತೋಷವೇ ನನ್ನ ದೊಡ್ಡ ಸಂಪತ್ತು’ ಹೀಗೆನ್ನುತ್ತಾ ಭಾವುಕರಾದ ಪ್ರಧಾನಿ ಮೋದಿ

Recent News