ಇಡಿ ಇಕ್ಕಳದಲ್ಲಿ ಸಿಲುಕಿ ನಲುಗಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ – ಇಡಿ ಕೇಸ್ ರದ್ದು

ಇಡಿ ಇಕ್ಕಳದಲ್ಲಿ ಸಿಲುಕಿ ನಲುಗಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ – ಇಡಿ ಕೇಸ್ ರದ್ದು

ನವದೆಹಲಿ : ಇಡಿ ಇಕ್ಕಳದಲ್ಲಿ ಸಿಲುಕಿ ನಲುಗಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. 2018 ರಲ್ಲಿ ಅವರ ವಿರುದ್ಧ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ನ್ಯಾ. ಸೂರ್ಯ ಕಾಂತ್ ಮತ್ತು ಕೆವಿ ವಿಶ್ವನಾಥನ್ ಅವರ ಪೀಠ ಮಂಗಳವಾರ ರದ್ದುಗೊಳಿಸಿದೆ. ಲೋಕಸಭೆ ಚುನಾವಣೆ ಹೊತ್ತಲ್ಲಿ ಸರ್ವೋಚ್ಛ ನ್ಯಾಯಲಯದ ಈ ಆದೇಶ ಡಿಕೆಶಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ.

ಆಗಸ್ಟ್ 2019 ರಲ್ಲಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಪ್ರಕರಣ ಸುಧೀರ್ಘ ವಿಚಾರಣೆ ನಡೆಸಿದ್ದ ಪೀಠ ಇಂದು ಮಹತ್ವದ ಆದೇಶ ನೀಡಿದೆ.

ಇಂದು ಡಿ.ಕೆ ಶಿವಕುಮಾರ್ ಪರ ಹಿರಿಯ ವಕೀಲ ಸಿದ್ಧಾರ್ಥ್ ಲೂತ್ರಾ, ಇತರ ಆರೋಪಿಗಳ ಪರ ಹಿರಿಯ ವಕೀಲ ಡಾ.ಅಭಿಷೇಕ್ ಮನು ಸಿಂಘ್ವಿ ಮತ್ತು ಎಸ್.ನಾಗಮುತ್ತು ವಾದ ಮಂಡಿಸಿದರು. 120B ಪ್ರಕರಣ ಕೇವಲ ಸೆಡ್ಯೂಲ್ ಅಫೇನ್ಸ್‌ಗಳಲ್ಲಿ ಬಳಕೆ ಮಾಡಲಾಗುತ್ತದೆ, ಡಿ. ಕೆ ಶಿವಕುಮಾರ್ ಅವರದ್ದು ಆದಾಯ ತೆರಿಗೆ ಪ್ರಕರಣ, ಆದಾಯ ತೆರಿಗೆ ಪ್ರಕರಣದಲ್ಲಿ 120B ಬಳಕೆ ಸಾಧ್ಯವಿಲ್ಲ, 120B ಆಧರಿಸಿಯೇ ಪಿಎಂಎಲ್‌ಎ ಅಡಿಯಲ್ಲಿ ಇಡಿ ಪ್ರಕರಣ ದಾಖಲಿಸಿದೆ

ಆದರೆ 120B ಏಕಾಂಗಿಯಾಗಿ ಬಳಕೆ ಮಾಡಲು ಸಾಧ್ಯವಿಲ್ಲ, ಯಾವುದಾದರು ಇತರೆ ಕ್ರಮಿನಲ್ ಪ್ರಕರಣಗಳಲ್ಲಿ ಪೂರಕವಾಗಿವ 120B ಬಳಕೆ ಮಾಡಬಹುದು ಆದರೆ ಜಾರಿ ನಿರ್ದೇಶನಾಲಯ 120B ಆಧರಿಸಿಯೇ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಿ ಬಂಧಿಸಿದೆ ಇದು ಕಾನೂನು ಬಾಹಿರ ನಡೆ ಎಂದು ವಾದಿಸಿದರು. ವಾದ ಆಲಿಸಿದ ಕೋರ್ಟ್ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳ ಅರ್ಜಿ ಮಾನ್ಯ ಮಾಡಿ 120B ರದ್ದು ಮಾಡಿತು.

120 B ರದ್ದಾದ ಹಿನ್ನಲೆ ಡಿ.ಕೆ ಶಿವಕುಮಾರ್ ಮತ್ತು ಇತರೆ ಆರೋಪಿಗಳ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣ ರದ್ದಾಂತಾಗಲಿದೆ. ಈ ನಡುವೆ ಡಿ.ಕೆ ಶಿವಕುಮಾರ್ ವಿರುದ್ಧ ಐಟಿ ಕೇಸ್ ಮುಂದುವರಿಯಲಿದ್ದು ಈ ಬಗ್ಗೆ ಮಾಹಿತಿ ಸಲ್ಲಿಸಲು ಸುಪ್ರೀಂಂಕೋರ್ಟ್ ಆರು ವಾರಗಳ ಸಮಯ ನೀಡಿದೆ.

2017 ರಲ್ಲಿ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಆದಾಯ ತೆರಿಗೆ ದಾಳಿ ನಡೆಸಿತು. ಅವರ ದೆಹಲಿಯ ನಿವಾಸದಲ್ಲಿ ಸುಮಾರು ₹ 7 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು. ಐಟಿ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿದ್ದ ಇಡಿ ಸುಧೀರ್ಘ ವಿಚಾರಣೆಯ 2019ರ ಸೆಪ್ಟೆಂಬರ್‌ನಲ್ಲಿ ಇಡಿ ಬಂಧಿಸಿತ್ತು. 2019 ರ ಅಕ್ಟೋಬರ್‌ನಲ್ಲಿ ದೆಹಲಿ ಹೈಕೋರ್ಟ್‌ನಿಂದ ಅವರಿಗೆ ಜಾಮೀನು ನೀಡಿತು‌, ನಂತರ ಅದನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿಯಿತು.

ತಮ್ಮ ಬಂಧನಕ್ಕೂ ಮುನ್ನ ಡಿ.ಕೆ ಶಿವಕುಮಾರ್ ಮತ್ತು ಇತರರು ತಮಗೆ ಜಾರಿ ಮಾಡಿರುವ ಇಡಿ ಸಮನ್ಸ್‌ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 2019 ರಲ್ಲಿ, ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರು ಈ ರಿಟ್ ಅರ್ಜಿಗಳನ್ನು ವಜಾಗೊಳಿಸಿದ್ದರು. ಈ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿಲಾಗಿತ್ತು.

Previous Post
ನೀವು ಹಸಿವಿನಿಂದ ಸಾಯಬೇಕೆಂದು ಬಯಸುವ ಮೋದಿ: ರಾಹುಲ್ ಗಾಂಧಿ
Next Post
ಚುನಾವಣಾ ಬಾಂಡ್‌ಗಳ ಬಗ್ಗೆ ಮಾಹಿತಿ ನೀಡಲು ಜೂನ್ 30ರವರೆಗೆ ಗಡುವು ವಿಸ್ತರಿಸಲು ಎಸ್‌ಬಿಐ ಮನವಿ

Recent News