ಎನ್‌ಡಿಎಗೇ ಬೆಂಬಲ: ಚಂದ್ರಬಾಬು ನಾಯ್ಡು

ಎನ್‌ಡಿಎಗೇ ಬೆಂಬಲ: ಚಂದ್ರಬಾಬು ನಾಯ್ಡು

ನವದೆಹಲಿ, ಜೂ. 5: ದ್ರದಲ್ಲಿ ಸರಕಾರ ರಚನೆಗೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಪುನರುಚ್ಛರಿಸಿದ್ದಾರೆ. ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಈ ಬಗೆಗಿನ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ್ದು, ನಿಮಗೆ ಯಾವಾಗಲೂ ಸುದ್ದಿ ಬೇಕು. ನನಗೆ ಅನುಭವ ಇದೆ. ನಾನು ಈ ದೇಶದಲ್ಲಿ ಹಲವಾರು ರಾಜಕೀಯ ಬದಲಾವಣೆಗಳನ್ನು ನೋಡಿದ್ದೇನೆ. ನಾವು ಎನ್‌ಡಿಎಯಲ್ಲಿದ್ದೇವೆ, ನಾನು ಎನ್‌ಡಿಎ ಸಭೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ದೆಹಲಿಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಐದು ವರ್ಷಗಳ ಕಾಲ ಹೋರಾಟ ನಡಸಿದ್ದು, ಇದೀಗ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 293 ಸ್ಥಾನಗಳನ್ನು, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 233 ಸ್ಥಾನಗಳನ್ನು ಮತ್ತು ಇತರರು 17 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಬಿಜೆಪಿಗೆ ಸಂಪೂರ್ಣ ಬಹುಮತ ಸಿಗದ ಕಾರಣ ಟಿಡಿಪಿ ಮತ್ತು ಜೆಡಿಯು ಕಿಂಗ್‌ ಮೇಕರ್‌ ಆಗಿದೆ. ಈ ಎರಡೂ ಪಕ್ಷಗಳು ಚುನಾವಣೆ ಪೂರ್ವದಲ್ಲೇ ಎನ್‌ಡಿಎ ಜೊತೆ ಮೈತ್ರಿಯನ್ನು ಮಾಡಿಕೊಂಡಿದ್ದವು. ಆದರೆ ಫಲಿತಾಂಶದ ಬಳಿಕ ಇಂಡಿಯಾ ಮೈತ್ರಿಕೂಟದ ನಾಯಕರು ನಾಯ್ಡು ಮತ್ತು ನಿತೀಶ್‌ ಅವರನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಬೆಳವಣಿಗೆಗಳನ್ನು ಚಂದ್ರಬಾಬು ನಾಯ್ಡು ನಿರಾಕರಿಸಿದ್ದು, ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲವನ್ನು ಪುನರುಚ್ಛರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ದೂರವಿಡಬೇಕು, ಆದ್ದರಿಂದ ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್‌ ಅವರಿಗೆ ಈ ಮೊದಲು ಮನವಿಯನ್ನು ಕೂಡ ಮಾಡಿಕೊಂಡಿರುವುದನ್ನು ನಾವು ಗಮನಿಸಬಹುದಾಗಿದೆ.

Previous Post
ಜೂನ್‌ 8 ಅಲ್ಲ, ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ
Next Post
ವಿಶ್ವ ಪರಿಸರ ದಿನದಂದು ರಾಜಭವನದ ಅಂಗಳದಲ್ಲಿ ಸಸಿ ನೆಟ್ಟ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಹಾಗೂ  ರಾಜ್ಯಪಾಲರು

Recent News