ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳು ಕೇರಳಕ್ಕೆ

ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳು ಕೇರಳಕ್ಕೆ

ನವದೆಹಲಿ: ಎರಡು ದಿನಗಳ ಹಿಂದೆ ಕುವೈತ್‌ನಲ್ಲಿಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಮೃತದೇಹಗಳನ್ನು ಹೊತ್ತ ವಾಯುಸೇನೆಯ ವಿಶೇಷ ವಿಮಾನ ಕೇರಳಕ್ಕೆ ಬಂದಿಳಿದಿದೆ. ಮೃತರಲ್ಲಿ ಕೇರಳದ 23, ತಮಿಳುನಾಡಿನ ಏಳು, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಹಾಗೂ ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಸೇರಿದ್ದಾರೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡ ಅಧಿಕಾರಿಗಳಿಗೆ ನಾವು ಧನ್ಯವಾದ ತಿಳಿಸುತ್ತೇವೆ. ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ಅಧಿಕಾರಿಗಳು ಕ್ಷಿಪ್ರವಾಗಿ ಕಾರ್ಯೋನ್ಮುಖರಾಗಿದ್ದರು. ಇಂದು ವಿಶೇಷ ವಿಮಾನದಲ್ಲಿ ಮೃತದೇಹಗಳನ್ನು ಭಾರತಕ್ಕೆ ತರಲಾಗಿದೆ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇಂದ್ರ ಸಚಿವ ಸುರೇಶ್ ಗೋಪಿ, ಮಾಜಿ ಕೇಂದ್ರ ಸಚಿವ ವಿ ಮುರಳೀಧರನ್ ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು. ಮಂಗಾಫ್ ನಗರದ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಅಗ್ನಿ ಅವಘಡದಿಂದ ಕನಿಷ್ಠ 48 ಜನರು ಸಾವನ್ನಪ್ಪಿದ್ದರು. ವಸತಿ ಕಟ್ಟಡದಲ್ಲಿದ್ದ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಮೃತಪಟ್ಟಿದ್ದರು. 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಯಭಾರ ಕಚೇರಿ ತಿಳಿಸಿದೆ.

Previous Post
ಬಿಭವ್ ಕುಮಾರ್ ಜಾಮೀನು ಅರ್ಜಿ ವಿಚಾರಣೆ ದೆಹಲಿ ಪೊಲೀಸ್‌ಗೆ ಹೈಕೋರ್ಟ್ ನೋಟಿಸ್
Next Post
ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ ಡಿ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ..!

Recent News