ಘರ್ ಘರ್ ಗ್ಯಾರಂಟಿ ಅಭಿಯಾನಕ್ಕೆ ಖರ್ಗೆ ಚಾಲನೆ
ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆ ತಯಾರಿಯಲ್ಲಿರುವ ಕಾಂಗ್ರೆಸ್ ‘ಘರ್ ಘರ್ ಗ್ಯಾರಂಟಿ’ ಅಭಿಯಾನವನ್ನು ಆರಂಭಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಇಂದು ದೆಹಲಿಯಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು. ಪಕ್ಷದ ಐದು ಗ್ಯಾರಂಟಿಗಳ ಬಗ್ಗೆ ಜಾಗೃತಿ ಮೂಡಿಸಲು ದೇಶದ 8 ಕೋಟಿ ಕುಟುಂಬಗಳನ್ನು ಅಭಿಯಾನದ ಮೂಲಕ ತಲುಪುವ ಯೋಜನೆ ಮಾಡಿದೆ.
ನಮ್ಮ “ಪಂಚ ನ್ಯಾಯ ಪಚೀಸ್ ಗ್ಯಾರಂಟಿ” ( 5 ನ್ಯಾಯ 25 ಗ್ಯಾರಂಟಿ ) ಅನ್ನು ಜನರಿಗೆ ತಲುಪಿಸಲು ಈ ಗ್ಯಾರಂಟಿ ಕಾರ್ಡ್ ಅನ್ನು ವಿತರಿಸುತ್ತಿದ್ದೇವೆ. ಎಲ್ಲಾ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಈ ಕಾರ್ಡ್ ಅನ್ನು ದೇಶದಾದ್ಯಂತ ಮನೆ ಮನೆಗೆ ತಲುಪಿಸಲಿದ್ದಾರೆ ಈ ಮೂಲಕ ನಮ್ಮ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಏನು ಮಾಡಲಿದೆ ಎಂಬುದನ್ನು ಜನರಿಗೆ ತಿಳಿಸುತ್ತೇವೆ ಎಂದು ಖರ್ಗೆ ಹೇಳಿದರು.
ಇನ್ನು ಆಡಳಿರೂಢ ಬಿಜೆಪಿ ವಿರುದ್ಧ ಪ್ರಬಲ ವಿರೋಧ ಪಕ್ಷವಾಗಿ ಅಖಾಡಕ್ಕೆ ಇಳಿದಿರುವ ಕಾಂಗ್ರೇಸ್ ಎಪ್ರೀಲ್ 5 ರಂದು ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್ನ ಪ್ರಣಾಳಿಕೆಯು ಯುವ ನ್ಯಾಯ, ನಾರಿ ನ್ಯಾಯ, ‘ಕಿಸಾನ್ ನ್ಯಾಯ, ಶ್ರಮಿಕ್ ನ್ಯಾಯ ಮತ್ತು ಹಿಸ್ಸೆದಾರಿ ನ್ಯಾಯ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೇಸ್ ಈ ನ್ಯಾಯದ ಐದು ಆಧಾರ ಸ್ತಂಭಗಳ ಮೇಲೆ ಒತ್ತು ಇತರೆ ಘೋಷಣೆಗಳನ್ನು ಮಾಡಲಿದೆ.
ಐದು ಪ್ರಮುಖ ಗ್ಯಾರಂಟಿಯಾಗಿದ್ದು ಇದರ ಜೊತೆಗೆ ದೇಶಕ್ಕೆ ಅನ್ವಯಿಸುವ ರೀತಿಯಲ್ಲಿ ದೊಡ್ಡ ಘೋಷಣೆ ಒಳಗೊಂಡಿರಲಿದೆ ಎನ್ನಲಾಗಿದೆ. ಈ ಎಲ್ಲ ಅಂಶಗಳನ್ನು ಜನರ ಮನೆಗೆ ತಲುಪಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ ಜನರನ್ನು ಸೆಳೆಯುವ ಲೆಕ್ಕಚಾರದಲ್ಲಿದೆ ಕಾಂಗ್ರೇಸ್.