ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟಕ್ಕೆ ಇಬ್ಬರು ಯೋಧರು ಹುತಾತ್ಮ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಕ್ಸಲೀಯರು ನಡೆಸಿದ ಸುಧಾರಿತ ಸ್ಫೋಟಕ ಸಾಧನ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ. ರಾಜ್ಯ ಕಾರ್ಯಪಡೆಯ ಮುಖ್ಯ ಕಾನ್ಸ್‌ಟೇಬಲ್ ಭರತ್ ಲಾಲ್ ಸಾಹು ಮತ್ತು ಕಾನ್‌ಸ್ಟೇಬಲ್ ಸತೇರ್ ಸಿಂಗ್ ಹುತಾತ್ಮರಾಗಿದ್ದಾರೆ.

ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ. ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ.

ಗಾಯಗೊಂಡ ಯೋಧರು ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಕುಮಾರ್ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ವೈದ್ಯಕೀಯ ಆರೈಕೆಗಾಗಿ ಅವರನ್ನು ರಾಯ್‌ಪುರಕ್ಕೆ ವಿಮಾನದಲ್ಲಿ ಸಾಗಿಸಲು ಸಿದ್ಧತೆ ನಡೆಸಲಾಗುತ್ತಿದೆ.

Previous Post
ಕಮಾಂಡೋ ಕಾರ್ಯಚರಣೆ ; 12 ನಕ್ಸಲರು ಸಾವು
Next Post
ಹಳಿ ತಪ್ಪಿದ ರೈಲು, ದುರಂತಕ್ಕೆ ನಾಲ್ವರು ದುರ್ಮರಣ

Recent News