ಜುಲೈ ಅಂತ್ಯಕ್ಕೆ ಬಿಜೆಪಿ ಆಡಳಿತ ರಾಜ್ಯಗಳ ಸಭೆ

ಜುಲೈ ಅಂತ್ಯಕ್ಕೆ ಬಿಜೆಪಿ ಆಡಳಿತ ರಾಜ್ಯಗಳ ಸಭೆ

ನವದೆಹಲಿ : ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಸಭೆ ನಡೆಸಲು ಹೈಕಮಾಂಡ್ ನಿರ್ಧರಿಸಿದ್ದು, ಜುಲೈ ಅಂತ್ಯದಲ್ಲಿ ದೆಹಲಿಯಲ್ಲಿ ಈ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಜೆಪಿ ನಡ್ಡಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.

ಸಭೆಯಲ್ಲಿ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಲ್ಯಾಣ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಯಲಿದೆ. ರಾಜ್ಯ ಸರ್ಕಾರಗಳು ಮತ್ತು ಬಿಜೆಪಿ ರಾಜ್ಯ ಸಂಘಟನೆಗಳೊಂದಿಗೆ ಕೇಂದ್ರದ ಸಮನ್ವಯವೂ ಸಭೆಯ ಕಾರ್ಯಸೂಚಿಯ ಭಾಗವಾಗಿರಲಿದೆ ಎನ್ನಲಾಗಿದೆ.

ಲೋಕಸಭೆ ಅನಿರೀಕ್ಷಿತ ಫಲಿತಾಂಶ ಮತ್ತು ವಿಧಾನಸಭೆ ಉಪ ಚುನಾವಣೆಗಳಲ್ಲಿ ಹಿನ್ನಡೆಯಾದ ಬೆನ್ನಲೆ ಈ ಸಭೆ ಕರೆಯಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ. ವರ್ಷ್ಯಾಂತ್ಯಕ್ಕೆ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದ್ದು ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಸಮರ್ಥವಾಗಿ ಕೆಲಸ ಮಾಡುವುದು, ಜನರಲ್ಲಿ ಮತ್ತಷ್ಟು ವಿಶ್ವಾಸ ತುಂಬುವ‌ ನಿಟ್ಟಿನಲ್ಲಿ ಚರ್ಚೆಗಳು ನಡೆಯಲಿದೆ ಎಂದು ಮೂಲಗಳು ಹೇಳಿವೆ

Previous Post
ಅಗ್ನಿವೀರ್‌ಗಳಿಗೆ 10% ಮೀಸಲಾತಿ, ಚುನಾವಣೆಗೂ ಮುನ್ನ ಹರಿಯಾಣ ಸರ್ಕಾರದಿಂದ ಮಹತ್ವದ ಘೋಷಣೆ
Next Post
ಕರ್ನಾಟಕದ ಕೊಬ್ಬರಿ ಬೆಳೆಗಾರರಿಗೆ ಸಿಹಿ ಸುದ್ದಿ ಹೆಚ್ಚುವರಿ ಖರೀದಿಗೆ ಕೇಂದ್ರ ಸರ್ಕಾರದ ಒಪ್ಪಿಗೆ

Recent News