ಪ್ರತಿದಿನ ಸರಾಸರಿ 27 ಸೈಬರ್ ವಂಚನೆ ಪ್ರಕರಣ ₹25,000 ಕೋಟಿ ಕಳೆದುಕೊಂಡ ಭಾರತೀಯರು!

ಪ್ರತಿದಿನ ಸರಾಸರಿ 27 ಸೈಬರ್ ವಂಚನೆ ಪ್ರಕರಣ ₹25,000 ಕೋಟಿ ಕಳೆದುಕೊಂಡ ಭಾರತೀಯರು!

ನವದೆಹಲಿ : ಕಳೆದ ಮೂರು ವರ್ಷಗಳಲ್ಲಿ ಸೈಬರ್ ವಂಚನೆಗಳಿಂದ ಭಾರತೀಯರು 25,000 ಕೋಟಿ ರೂಪಾಯಿಗಳ ಕಳೆದುಕೊಂಡಿದ್ದಾರೆ ಇದು ಸಿಕ್ಕಿಂನ ವಾರ್ಷಿಕ ಬಜೆಟ್‌ಗಿಂತ ದ್ವಿಗುಣವಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಹೇಳಿವೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಗೃಹ ಸಚಿವಾಲಯ ಮತ್ತು MeitY ಅಧಿಕಾರಿಗಳು Instagram, WhatsApp ಮತ್ತು Google ನಂತಹ ವಿವಿಧ ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳೊಂದಿಗೆ ಈ ಕಳವಳಗಳನ್ನು ಹಂಚಿಕೊಂಡಿದ್ದಾರೆ.

ಕಳೆದ ವರ್ಷವೊಂದರಲ್ಲೇ ಪ್ರತಿದಿನ ಸರಾಸರಿ 27 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ. ಜನವರಿ 2024 ರಿಂದ ಜೂನ್ 2024 ರವರೆಗೆ ಕೇಂದ್ರ ಸೈಬರ್ ವಂಚನೆ ಏಜೆನ್ಸಿಯು 709 ದೂರುಗಳನ್ನು ಸ್ವೀಕರಿಸಿದೆ, ಇದರಲ್ಲಿ ಸಂತ್ರಸ್ತರು 1 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ. ಈ ಅವಧಿಯಲ್ಲಿ ಒಟ್ಟು ರೂ 1,421 ಕೋಟಿ ಹಣವನ್ನು ಜನರು ವಂಚನೆಯಿಂದ ಕಳೆದುಕೊಂಡಿದ್ದಾರೆ ಎಂದು ಡೇಟಾ ಬಹಿರಂಗಪಡಿಸಿದೆ.

ಎಲ್ಲಾ ಕಂಪನಿಗಳು ಆರಂಭಿಕ ಹಂತದಲ್ಲಿಯೂ ಸಹ ವಿವಿಧ ರೀತಿಯ ವಿವರಗಳನ್ನು ಕೇಳುತ್ತವೆ, ಇದು ಸೈಬರ್ ವಂಚನೆಯನ್ನು ತಡೆಯುವ ಪ್ರಕ್ರಿಯೆಯನ್ನು ವಿಳಂಬಗೊಳಿಸುತ್ತದೆ. ವಂಚಕರು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್‌ಗಳನ್ನು ಆಂಪ್ಲಿಫೈಯರ್‌ಗಳಾಗಿ ಬಳಸುತ್ತಿದ್ದಾರೆ, ಇದರಲ್ಲಿ ವಂಚಕರು ಸುಲಭವಾಗಿ ಜನರನ್ನು ಬಲಿಪಶುಗಳನ್ನಾಗಿ ಮಾಡುತ್ತಿದ್ದಾರೆ ಎಂದು ಸಭೆಯಲ್ಲಿ ಭಾಗಿಯಾಗಿದ್ದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

AIIMS, ICMR ಸೈಬರ್ ದಾಳಿಯಿಂದ ಸಾಲ ನೀಡುವ ಅಪ್ಲಿಕೇಶನ್ ವಂಚನೆಗಳವರೆಗೆ ರಾಷ್ಟ್ರೀಯ ಸೈಬರ್ ಅಪರಾಧ ಪೋರ್ಟಲ್ (NCRP) 2020 ರಿಂದ ಫೆಬ್ರವರಿ 2024ರ ನಡುವೆ 31 ಲಕ್ಷ ದೂರುಗಳನ್ನು ಸ್ವೀಕರಿಸಿದೆ. ಕೇಂದ್ರ ಸರ್ಕಾರದ ಅಧಿಕೃತ ಸಂವಹನದ ಪ್ರಕಾರ, ಸೈಬರ್ ವಂಚನೆ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಬಂಧನವಾಗುತ್ತಿರುವ ಹಿನ್ನಲೆ ಈ ಬೆಳವಣಿಗೆ ಹೆಚ್ಚುತ್ತಿದೆ ಎನ್ನಲಾಗಿದೆ.

ವಿವಿಧ ಕಾನೂನು ಜಾರಿ ಸಂಸ್ಥೆಗಳು ದಾಖಲಾದ ಪ್ರಕರಣಗಳು ಅಥವಾ ಎಫ್‌ಐಆರ್‌ಗಳು 66,000 ಕ್ಕಿಂತ ಹೆಚ್ಚಿವೆ, ಆದರೆ ಈ ವರ್ಷದವರೆಗೆ ಕೇವಲ 500 ಪ್ರಕರಣಗಳಲ್ಲಿ ಬಂಧನವಾಗಿದೆ. ಈ ಮೂಲಕ ಶೇ1% ವಂಚಕರ ಬಂಧನವಾಗಿರುವುದು ಈ ಬೆಖವಣಿಗೆಗೆ ಕಾರಣವಾಗಿದೆ. ಸಾಲದ ಆ್ಯಪ್‌ಗಳು, ಪೊಂಜಿ ಸ್ಕೀಮ್‌ಗಳು ಮತ್ತು ಸ್ಟಾಕ್ ಟ್ರೇಡಿಂಗ್ ಗ್ರೂಪ್‌ಗಳಲ್ಲಿ ನಕಲಿ ಜಾಹೀರಾತುಗಳನ್ನು ಪೂರ್ವಭಾವಿಯಾಗಿ ಪತ್ತೆಹಚ್ಚಲು ಮತ್ತು ಅದರ ವಿರುದ್ಧ ಕ್ರಮ ಕೈಗೊಳ್ಳಲು ಸಾಮಾಜಿಕ ಮಾಧ್ಯಮಗಳಿಗೆ ಸರ್ಕಾರ ತಿಳಿಸಿದೆ.

Previous Post
ನೀಟ್ ಪರೀಕ್ಷೆಯಲ್ಲಿ ಅಕ್ರಮ – ಶೇ.0.001ರಷ್ಟು ನಿರ್ಲಕ್ಷ್ಯ ಕಂಡುಬಂದರೂ ಕೂಲಂಕುಷವಾಗಿ ನಿಭಾಯಿಸಬೇಕು – ಸುಪ್ರೀಂ ಸೂಚನೆ
Next Post
ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್

Recent News