ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ಪರಿಗಣನೆಯಲ್ಲಿದೆ – ಚುಣಾನಣಾ ಆಯೋಗ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದೂರು ಪರಿಗಣನೆಯಲ್ಲಿದೆ – ಚುಣಾನಣಾ ಆಯೋಗ

ನವದೆಹಲಿ : ರಾಜಸ್ಥಾನದ ಬನ್ಸ್ವಾರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೇಸ್ ಸಲ್ಲಿಸಿದ್ದ ದೂರು ಸ್ವೀಕರಿಸಿದ್ದು ಇದು ಪರಿಗಣನೆಯಲ್ಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ಹೇಳಿದೆ. ಪ್ರಧಾನಿ ಮೋದಿ ಅವರ ‘ಸಂಪತ್ತಿನ ಮರುಹಂಚಿಕೆ’ ಭಾಷಣಕ್ಕಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಸೋಮವಾರ ಕಾಂಗ್ರೆಸ್ ನಾಯಕರ ನಿಯೋಗವು ಚುನಾವಣಾ ಆಯೋಗವನ್ನು ಭೇಟಿ ಮಾಡಿ ಪ್ರಧಾನಿ ವಿರುದ್ಧ ದೂರು ನೀಡಿತ್ತು.

ಪ್ರಧಾನಿಯವರು ಸುಳ್ಳು ಹೇಳುತ್ತಿದ್ದಾರೆ ಮತ್ತು ಹಿಂದೂ ಮತ್ತು ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದ್ದಾರೆ ರಾಜಸ್ಥಾನ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿಯವರ “ಸಂಪತ್ತಿನ ಮರುಹಂಚಿಕೆ” ಹೇಳಿಕೆಯು “ವಿಭಜಕ” ಮತ್ತು “ದುರುದ್ದೇಶಪೂರಿತ” ಕಾಂಗ್ರೆಸ್‌ಗೆ ಮತ ಹಾಕದಂತೆ ಮತದಾರರನ್ನು ಹೇಳಲು ಪ್ರಧಾನಿ ಮೋದಿ ಅವರು ಧರ್ಮವನ್ನು ಬಳಸುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.

ಭಾನುವಾರ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಾಯಂದಿರು ಮತ್ತು ಸಹೋದರಿಯ ಚಿನ್ನದ ಮಾಹಿತಿ ಪಡೆದು ಲೆಕ್ಕ ಹಾಕಿ ನಂತರ ಆ ಆಸ್ತಿಯನ್ನು ಹಂಚುತ್ತಾರೆ. ಮನಮೋಹನ್ ಸಿಂಗ್ ಸರ್ಕಾರ ದೇಶದ ಆಸ್ತಿಯಲ್ಲಿ ಮುಸ್ಲಿಮರಿಗೆ ಮೊದಲ ಹಕ್ಕಿದೆ ಎಂದು ಹೇಳಿದ್ದರು. ಹೆಚ್ಚು ಮಕ್ಕಳಿರುವವರಿಗೆ ನಿಮ್ಮ ಸಂಪತ್ತನ್ನು ಹಂಚಲಾಗುತ್ತದೆ.

ನಿಮ್ಮ ಕಷ್ಟಪಟ್ಟು ದುಡಿದ ಹಣ ನುಸುಳುಕೋರರಿಗೆ ಹೋಗಬೇಕೇ? ನೀವು ಇದನ್ನು ಒಪ್ಪುತ್ತೀರಾ? ನಿಮ್ಮ ಆಸ್ತಿಯನ್ನು ವಶಪಡಿಸಿಕೊಳ್ಳಲು ಸರ್ಕಾರಕ್ಕೆ ಹಕ್ಕಿದೆಯೇ? ಚಿನ್ನವು ಪ್ರದರ್ಶನಕ್ಕಾಗಿ ಅಲ್ಲ, ಅದು ಮಹಿಳೆಯರ ಸ್ವಾಭಿಮಾನಕ್ಕೆ ಸಂಬಂಧಿಸಿದೆ. ಮಂಗಳಸೂತ್ರವು ಮಹಿಳೆಯರ ಕನಸಿಗೆ ಸಂಬಂಧಿಸಿದೆ, ಕಾಂಗ್ರೆಸ್ ಈಗ ನಗರ ನಕ್ಸಲರ ಹಿಡಿತದಲ್ಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

Previous Post
ಮುರುಘಾ ಶ್ರೀಗಳಿಗೆ ಮತ್ತೆ ನ್ಯಾಯಂಗ ಬಂಧನ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹಿನ್ನಲೆ | 4 ತಿಂಗಳ ನ್ಯಾಯಂಗ ಬಂಧನಕ್ಕೆ ಸುಪ್ರೀಂ ಆದೇಶ
Next Post
ಪತಂಜಲಿ ವಿರುದ್ಧ ಕ್ರಮ ಕೈಗೊಳ್ಳದ ಕೇಂದ್ರಕ್ಕೆ ಸುಪ್ರೀಂ ಚಾಟಿ

Recent News