ಪ್ರಿಯಾಂಕಾಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ – ರಾಬರ್ಟ್ ವಾದ್ರಾ

ಪ್ರಿಯಾಂಕಾಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ – ರಾಬರ್ಟ್ ವಾದ್ರಾ

ನವದೆಹಲಿ : ಪ್ರಿಯಾಂಕಾಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ ಅವರು ಸಂಸತ್ತಿನಲ್ಲಿ ಇರಬೇಕು ಎನ್ನುವುದು ನನ್ನ ಆಸೆ, ಜನರು ಪ್ರಿಯಾಂಕರನ್ನ ಆಯ್ಕೆ ಮಾಡುವ ಮೂಲಕ ಒಳ್ಳೆಯ ತೀರ್ಪು ನೀಡಲಿದ್ದಾರೆ ಎಂದು ರಾಬರ್ಟ್ ವಾದ್ರಾ ಹೇಳಿದ್ದಾರೆ.

ಪ್ರಿಯಾಂಕಗಾಂಧಿ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, ನಾನು ಯಾವಾಗಲೂ ಸಕ್ರಿಯ ರಾಜಕಾರಣದಲ್ಲಿರಲು ಬಯಸುತ್ತೇನೆ, ಪ್ರಿಯಾಂಕಾ ಗಾಂಧಿ ಸಂಸದರಾಗಬೇಕೆಂದು ನಾನು ಬಯಸುತ್ತೇನೆ, ಅವರು ಹೆಚ್ಚಿನ ಬಹುಮತದಿಂದ ಗೆಲ್ಲುತ್ತಾರೆ ಎಂದು ನಾನು ಭಾವಿಸುತ್ತೇನೆ. ಅವರು ಜನರ ನಿಜವಾದ ಸಮಸ್ಯೆಗಳನ್ನು ಪ್ರಸ್ತಾಪಿಸಬೇಕೆಂದು ನಾನು ಬಯಸುತ್ತೇನೆ. ಪ್ರಿಯಾಂಕಾ ಬುದ್ಧಿವಂತ ಮಹಿಳೆ ಅವರು ನನಗಿಂತ ಮೊದಲು ಸಂಸತ್ತಿನಲ್ಲಿ ಇರಬೇಕೆಂದು ನಾನು ಬಯಸುತ್ತೇನೆ.

ಆದರೆ ನಮ್ಮ ಈ ನಿರ್ಧಾರದಿಂದ ಬಿಜೆಪಿ ನಾಯಕರು ಚಿಂತಿತರಾಗಿದ್ದಾರೆ, ಮುಂದೇನು ಮಾಡಬಹುದೆಂಬುದನ್ನು ಅರ್ಥಮಾಡಿಕೊಳ್ಳಲು ಅವರು ಒಟ್ಟಿಗೆ ಸೇರುತ್ತಿದ್ದಾರೆ. ಪ್ರಿಯಾಂಕಾ ಅವರು ಸಮಸ್ಯೆಗಳನ್ನು ಎತ್ತುತ್ತಾರೆ. ಲಡ್ಕಿ ಹೂಂ ಲಾಡ್ ಸಕ್ತಿ ಹೂಂ ಎಂಬ ಘೋಷಣೆಯನ್ನು ನೀಡಿ ಅವರು ಮಹಿಳೆಯರಿಗಾಗಿ ದೀರ್ಘಕಾಲ ಹೋರಾಡಿದವರು ಹೀಗಾಗಿ ಬಿಜೆಪಿ ಹೆದರುತ್ತಿದೆ ಎಂದರು.

Previous Post
ಲೋಕಸಭೆ ಫಲಿತಾಂಶ ಭಾರತೀಯ ರಾಜಕೀಯದಲ್ಲಿ ಟೆಕ್ಟೋನಿಕ್ ಶಿಫ್ಟ್ – ರಾಹುಲ್ ಗಾಂಧಿ
Next Post
ರೈಲು ಅಪಘಾತ ಮೋದಿ ಸರ್ಕಾರದ ನಿರ್ಲಕ್ಷ್ಯಕ್ಕೆ ಮತ್ತೊಂದು ಸಾಕ್ಷಿ ಯೂಥ್ ಕಾಂಗ್ರೇಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ವಾಗ್ದಾಳಿ

Recent News