ಭಾರತ ಪೌರತ್ವ ಪಡೆದ ಪಾಕಿಸ್ತಾನಿ ಮಹಿಳೆಯರೊಂದಿಗೆ ರಕ್ಷಾ ಬಂಧನ ಆಚರಿಸಿದ ಸಚಿವ ಪಿಯೂಷ್ ಗೋಯಲ್
ನವದೆಹಲಿ: ದೆಹಲಿಯಲ್ಲಿ ನೆಲೆಸಿರುವ ಪಾಕಿಸ್ತಾನಿ ಹಿಂದೂ ಮಹಿಳಾ ನಿರಾಶ್ರಿತರೊಂದಿಗೆ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಸೋಮವಾರ ರಕ್ಷಾ ಬಂಧನವನ್ನು ಆಚರಿಸಿದರು. ನೆರೆಯ ದೇಶಗಳಿಂದ ವಲಸೆ ಬಂದಿರುವ ಈ ಪ್ರಜೆಗಳಿಗೆ ಪೌರತ್ವ ಕಾಯ್ದೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.
ರಾಖಿ ಕಟ್ಟಿಸಿಕೊಂಡ ಬಳಿಕ ಮಾತನಾಡಿದ ಅವರು, ಇದು ನನ್ನ ಜೀವನದ ಅತ್ಯುತ್ತಮ ರಕ್ಷಾ ಬಂಧನ ಆಚರಣೆಗಳಲ್ಲಿ ಒಂದಾಗಿದೆ. ಮೋದಿ-ಸರ್ಕಾರದ ಬಲವಾದ ಇಚ್ಛಾಶಕ್ತಿಯಿಂದಾಗಿ ಈ ಎಲ್ಲಾ ಪಾಕಿಸ್ತಾನಿ ಹಿಂದೂ ಮಹಿಳಾ ನಿರಾಶ್ರಿತರು CAA ಅಡಿಯಲ್ಲಿ ಭಾರತೀಯ ಪೌರತ್ವವನ್ನು ಪಡೆಯಲು ಸಾಧ್ಯವಾಯಿತು ಎಂದು ಅವರು ಹೇಳಿದರು
ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಡಿಸೆಂಬರ್ 31, 2014 ರ ಮೊದಲು ಭಾರತಕ್ಕೆ ಬಂದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದಾಖಲೆರಹಿತ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡಲು ಪೌರತ್ವ (ತಿದ್ದುಪಡಿ) ಕಾಯ್ದೆ 2019 ರ ಅನುಷ್ಠಾನವನ್ನು ಕೇಂದ್ರವು ಘೋಷಿಸಿತ್ತು. ಈ ವಲಸಿಗರಲ್ಲಿ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ.
ಕೋಲ್ಕತ್ತಾದಲ್ಲಿ ಆರ್ಜಿ ಕರ್ ಆಸ್ಪತ್ರೆಯ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಕುರಿತು ಸಚಿವರು “ತುಂಬಾ ದುರದೃಷ್ಟಕರ, ಇದು ರಾಷ್ಟ್ರದ ಚೈತನ್ಯ ಮತ್ತು ಆತ್ಮಸಾಕ್ಷಿಯನ್ನು ಜಾಗೃತಗೊಳಿಸುತ್ತದೆ ಎಂದು ನನಗೆ ಖಾತ್ರಿಯಿದೆ. ಇದು ನಿಜವಾಗಿಯೂ ಹೀನ ಕೃತ್ಯ ಎಂದು ಹೇಳಿದರು.