ಮಾನ್ಸೂನ್‌ನಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಅಧಿಕ ಮಳೆ

ಮಾನ್ಸೂನ್‌ನಲ್ಲಿ ನಿರೀಕ್ಷಿತ ಪ್ರಮಾಣಕ್ಕಿಂತ ಅಧಿಕ ಮಳೆ

ನವದೆಹಲಿ : ಮುಂಬರುವ ಮಾನ್ಸೂನ್ ಅವಧಿಯಲ್ಲಿ ನಿಗಧಿತ ಪ್ರಮಾಣಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಭಾರತದಲ್ಲಿ ಉತ್ತಮ ಮಾನ್ಸೂನ್‌ಗೆ ಸಂಬಂಧಿಸಿದ ಪರಿಸ್ಥಿತಿಗಳು ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹವಮಾನ ಇಲಾಖೆ ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ, 1951-2023 ರ ನಡುವಿನ ಅಂಕಿಅಂಶಗಳ ಆಧಾರದ ಮೇಲೆ ಭಾರತವು ಒಂಬತ್ತು ಸಂದರ್ಭಗಳಲ್ಲಿ ಮಾನ್ಸೂನ್ ಅವಧಿಯಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ಕಂಡಿದೆ. ಇದೇ ಆಧಾರದ ಮೇಲೆ ಈ ಬಾರಿ ಉತ್ತಮ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ ಎಂದರು.

ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಒಣಹವೆ ಇರಲಿದ್ದು, ಏ.18 ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಏ.18ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗುಂಬೆ, ಧರ್ಮಸ್ಥಳ, ಎನ್‌ಆರ್‌ಪುರ, ಧಾರವಾಡ, ಬೇವೂರು, ಮುದಗಲ್, ಇಂಡಿ, ಶಿವಮೊಗ್ಗ, ಲಿಂಗನಮಕ್ಕಿ, ಆನವಟ್ಟಿ, ಔರಾದ್, ದೇವರಹಿಪ್ಪರಗಿ, ಯಡ್ರಾಮಿ, ಕಲಘಟಗಿ, ತ್ಯಾಗರ್ತಿ, ಕಳಸ, ಹರಪನಹಳ್ಳಿ, ಕುಡತಿನಿ, ಕೊಪ್ಪ, ತರೀಕೆರೆ, ಶೃಂಗೇರಿ, ಸಿದ್ದಾಪುರ, ಸಿಂಧನೂರು, ಹಿರೆಕೆರೂರು, ಲಕ್ಷ್ಮೇಶ್ವರ, ಅಣ್ಣಿಗೆರೆ, ಕಮ್ಮರಡಿ, ಸವಣೂರು, ತಾಳಗುಪ್ಪ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ.

Previous Post
ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿರುವೆ: ಬಸವರಾಜ ಬೊಮ್ಮಾಯಿ
Next Post
ಎಲ್‌ಡಿಎಫ್ ಮತ್ತು ಯುಡಿಎಫ್ ರಾಜ್ಯದ ಪರಿಸ್ಥಿತಿ ಹದಗೆಡೆಸುತ್ತಿವೆ ಕೇರಳದಲ್ಲಿ ವಿಪಕ್ಷಗಳ ವಿರುದ್ಧ ಮೋದಿ ವಾಗ್ದಾಳಿ

Recent News