ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸೋನಿಯಗಾಂಧಿ; ರಾಜ್ಯದಿಂದ ಆಯ್ಕೆಯಾದ ಅಜಯ್ ಮಾಕೇನ್, ಸೈಯದ್ ನಾಸೀರ್ ಹುಸೇನ್ ಕೂಡಾ ಪ್ರಮಾಣ ಸ್ವೀಕಾರ

ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸೋನಿಯಗಾಂಧಿ; ರಾಜ್ಯದಿಂದ ಆಯ್ಕೆಯಾದ ಅಜಯ್ ಮಾಕೇನ್, ಸೈಯದ್ ನಾಸೀರ್ ಹುಸೇನ್ ಕೂಡಾ ಪ್ರಮಾಣ ಸ್ವೀಕಾರ

ನವದೆಹಲಿ : ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಗಾಂಧಿ ರಾಜಕೀಯದ ಹೊಸ ಇನ್ನಿಂಗ್ಸ್ ಆರಂಭಿಸಿದ್ದು ಇಂದು ರಾಜ್ಯಸಭೆ ಸದಸ್ಯೆಯಾಗಿ‌ ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು. ರಾಯ್ ಬರೇಲಿಯಿಂದ ಸಂಸದೆಯಾಗಿ ಆಯ್ಕೆಯಾಗುತ್ತಿದ್ದ ಅವರು ಮೊದಲ ಬಾರಿಗೆ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಂದ ತೆರವಾದ ಸ್ಥಾನಕ್ಕೆ ರಾಜಸ್ಥಾನದಿಂದ ಅವರು ಆಯ್ಕೆಯಾಗಿದ್ದಾರೆ.

ಇಂದು ಸಂಸತ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಮತ್ತು ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್ ಪ್ರಮಾಣವಚನ ಭೋದಿಸಿದರು‌. ಸೋನಿಯಗಾಂಧಿ ಜೊತೆಗೆ ಆರ್ಪಿಎನ್ ಸಿಂಗ್, ರೈಲ್ವೇ ಸಚಿವೆ ಅಶ್ವಿನಿ ವೈಷ್ಣವ್, ಕರ್ನಾಟಕದ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್, ಸೈಯದ್ ನಾಸೀರ್ ಹುಸೇನ್, ಪಶ್ಚಿಮ ಬಂಗಾಳದ ಬಿಜೆಪಿ ಸದಸ್ಯ ಸಾಮಿಕ್ ಭಟ್ಟಾಚಾರ್ಯ, ವೈಎಸ್‌ಆರ್‌ಸಿಪಿ ನಾಯಕರಾದ ಗೋಲಾ ಬಾಬು ರಾವ್, ಮೇಧಾ ರಘುನಾಥ್ ರೆಡ್ಡಿ ಮತ್ತು ಯೆರುಂ ವೆಂಕಟ್ ಸುಬ್ಬಾ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದರು.

ಸೋನಿಯಗಾಂಧಿ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶುಭ ಹಾರೈಸಿದ್ದಾರೆ. ಲೋಕಸಭೆಯಲ್ಲಿ 25 ವರ್ಷಗಳನ್ನು ಪೂರೈಸಿರುವ ಅವರು ಮತ್ತು ಈಗ ನನ್ನ ಸಹ ಸದಸ್ಯರಾಗಿದ್ದಾರೆ. ನಾವು ಮೇಲ್ಮನೆಯಲ್ಲಿ ಅವರ ಉಪಸ್ಥಿತಿಗಾಗಿ ಕಾಯುತ್ತಿದ್ದೇವೆ. ಮುಂದೆ ಅವರ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ ಎಂದು ಅವರು ಎಕ್ಸ್‌ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೋನಿಯಗಾಂಧಿ ಅವರಿಗೆ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಅವರ ಅಳಿಯ ರಾಬರ್ಟ್ ವಾದ್ರಾ ಶುಭ ಹಾರೈಸಿದರು.

1999ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿ ಮತ್ತು ಕರ್ನಾಟಕದ ಬಳ್ಳಾರಿಯಿಂದ ಸೋನಿಯಾ ಗಾಂಧಿ ಮೊದಲ ಬಾರಿಗೆ ಸ್ಪರ್ಧಿಸಿದ್ದರು. ತಮ್ಮ ಪತಿ ರಾಜೀವ್ ಗಾಂಧಿ ಸತತ ನಾಲ್ಕು ಚುನಾವಣೆಗಳಲ್ಲಿ ಪ್ರತಿನಿಧಿಸುತ್ತಿದ್ದ ಅಮೇಥಿಯನ್ನು ಉಳಿಸಿಕೊಳ್ಳಲು ಅವರು ಬಳ್ಳಾರಿಯನ್ನು ತ್ಯಜಿಸಿದರು. 2004ರ ಚುನಾವಣೆಯಲ್ಲಿ, ಅವರು ಗಾಂಧಿ ಕುಟುಂಬದ ಪ್ರಭಾವ ಹೊಂದಿರುವ ರಾಯ್ ಬರೇಲಿಗೆ ಸ್ಥಳಾಂತರಗೊಂಡರು, ತಮ್ಮ ಮಗ ರಾಹುಲ್ ಗಾಂಧಿ ಅಮೇಥಿ ಕ್ಷೇತ್ರವನ್ನು ಬಿಟ್ಟುಕೊಟ್ಟರು.

ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ಕಾಂಗ್ರೆಸ್ 17 ಬಾರಿ ರಾಯ್ ಬರೇಲಿ ಗೆದ್ದಿದೆ. ಈ ಸ್ಥಾನವನ್ನು ಮೊದಲು ಫಿರೋಜ್ ಗಾಂಧಿ ಮತ್ತು ನಂತರ ಮೂರು ಸಂದರ್ಭಗಳಲ್ಲಿ ಇಂದಿರಾ ಗಾಂಧಿ ಪ್ರತಿನಿಧಿಸಿದರು. 1977 ರಲ್ಲಿ ಜನತಾ ಪಕ್ಷದ ನಾಯಕ ರಾಜ್ ನಾರಾಯಣ್ ಇಲ್ಲಿ ಇಂದಿರಾ ಗಾಂಧಿಯನ್ನು ಸೋಲಿಸಿದರು. 1996 ಮತ್ತು 1998 ರ ಚುನಾವಣೆಗಳಲ್ಲಿ ಬಿಜೆಪಿ ಈ ಸ್ಥಾನವನ್ನು ಗೆದ್ದಿತು.

Previous Post
ಬಿಹಾರದಲ್ಲಿ ಮೋದಿ ಚುನಾವಣಾ ಪ್ರಚಾರ – ಆರ್‌ಜೆಡಿ ವಿರುದ್ಧ ವಾಗ್ದಾಳಿ
Next Post
ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ದೆಹಲಿ ಹೈಕೋರ್ಟ್ ನಕಾರ

Recent News