ರಾಜ್ಯ ಬಿಜೆಪಿಗೆ ರಾಧಾಮೋಹನ್ ದಾಸ್ ಅಗರ್ವಾಲ್ ನೂತನ ಉಸ್ತುವಾರಿ

ರಾಜ್ಯ ಬಿಜೆಪಿಗೆ ರಾಧಾಮೋಹನ್ ದಾಸ್ ಅಗರ್ವಾಲ್ ನೂತನ ಉಸ್ತುವಾರಿ

ನವದೆಹಲಿ : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯ ಬಿಜೆಪಿ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ಬದಲಾವಣೆ ಮಾಡಲಾಗಿದೆ. ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ಆಗಿದ್ದ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಇದೀಗ ರಾಜ್ಯ ಬಿಜೆಪಿ ನೂತನ ಉಸ್ತುವಾರಿಯಾಗಿ ಮುಂದುವರಿಸಲಾಗಿದೆ. ಸುಧಾಕರ್ ರೆಡ್ಡಿ ಅವರನ್ನು ಸಹ ಉಸ್ತುವಾರಿಯನ್ನಾಗಿ ನೇಮಿಸಿಸಲಾಗಿದೆ.

ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರು ಆದೇಶ ಹೊರಡಿಸಿದ್ದಾರೆ. ಅರುಣ್ ಸಿಂಗ್ ಅವರು ಕರ್ನಾಟಕ ಬಿಜೆಪಿ ಉಸ್ತುವಾರಿಯಾಗಿದ್ದರು. ಈ ಹಿಂದೆ ರಾಧಮೋಹನ್ ದಾಸ್ ಅವರು ಲೋಕಸಭೆ ಚುನಾವಣೆಯ ರಾಜ್ಯ ಬಿಜೆಪಿ ಉಸ್ತುವಾರಿಯಾಗಿದ್ದರು.

ಲೋಕಸಭಾ ಚುನಾವಣೆ ವೇಳೆ ರಾಜ್ಯ ಬಿಜೆಪಿಯಲ್ಲಿ ಸ್ಫೋಟಗೊಂಡಿದ್ದ ಅಸಮಾಧಾನವನ್ನು ಶಮನ ಮಾಡುವಲ್ಲಿ ರಾಧಮೋಹನ್ ದಾಸ್ ಪ್ರಮುಖ ಪಾತ್ರ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಸೇರಿಕೊಂಡು ಅಸಮಾಧಾನಗೊಂಡಿದ್ದ ನಾಯಕರನ್ನು ಸಮಾಧಾನ ಮಾಡಿದ್ದರು. ಈ ಹಿನ್ನಲೆ ಅವರಿಗೆ ಪೂರ್ಣ ಜವಬ್ದಾರಿ ಹೊರಿಸಲಾಗಿದೆ.

Previous Post
ದೇಶದ ರಕ್ಷಣಾ ಉತ್ಪಾದನೆಯ ಮೌಲ್ಯದಲ್ಲಿ 16% ಬೆಳವಣಿಗೆ
Next Post
ಚುನಾವಣೆಯಲ್ಲಿ ಸೋತ ಬಳಿಕ ಪ್ರಧಾನಿ ಹುದ್ದೆಗೆ ರಿಷಿ ಸುನಕ್‌ ರಾಜೀನಾಮೆ

Recent News