ಎಸ್ಪಿಯಿಂದ ಎರಡನೇ ಪಟ್ಟಿ ಬಿಡುಗಡೆ, ಗ್ಯಾಂಗಸ್ಟರ್ ಸಹೋದರನಿಗೆ ಟಿಕೇಟ್
ಲಕ್ನೋ : ಕಾಂಗ್ರೆಸ್ ಪಕ್ಷದೊಂದಿಗೆ ನಡೆಯುತ್ತಿರುವ ಸೀಟು ಹಂಚಿಕೆ ಮಾತುಕತೆಗಳ ನಡುವೆ ಸಮಾಜವಾದಿ ಪಕ್ಷ (ಎಸ್ಪಿ) ಮುಂಬರುವ ಲೋಕಸಭೆ ಚುನಾವಣೆಗೆ 11 ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಪ್ರಕಟಿಸಿದೆ. ಗಮನಾರ್ಹ ಬೆಳವಣಿಗೆಯಲ್ಲಿ ಪಕ್ಷವು ಗ್ಯಾಂಗ್ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಅವರ ಸಹೋದರ ಅಫ್ಜಲ್ ಅನ್ಸಾರಿ ಅವರನ್ನು ಗಾಜಿಪುರದಿಂದ ಮತ್ತು ಹರೇಂದ್ರ ಮಲಿಕ್ ಅವರನ್ನು ಮುಜಾಫರ್ನಗರದಿಂದ ಕಣಕ್ಕಿಳಿಸಿದೆ.
ಈ ನಡುವೆ ಎಸ್ಪಿ ಮತ್ತು ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಅಂತಿಮಗೊಳ್ಳದ ಹೊರತು ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಸಮಾಜವಾದಿ ಪಕ್ಷ ಸೇರುವುದಿಲ್ಲ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಮಾತುಕತೆ ನಡೆಯುತ್ತಿದೆ, ಅವರಿಂದ ಪಟ್ಟಿಗಳು ಬಂದಿವೆ, ನಾವು ಪಟ್ಟಿಯನ್ನು ಸಹ ನೀಡಿದ್ದೇವೆ. ಸೀಟು ಹಂಚಿಕೆ ಮುಗಿದ ಕ್ಷಣದಲ್ಲಿ ಸಮಾಜವಾದಿ ಪಕ್ಷವು ಅವರ ನ್ಯಾಯ ಯಾತ್ರೆಯಲ್ಲಿ ಸೇರಿಕೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.