ಅಖಿಲೇಶ್ ಯಾದವ್ಗೆ ಸಿಬಿಐ ಸಮನ್ಸ್
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ ಸಮಾಜವಾದಿ ಪಕ್ಷದ ನಾಯಕ, ಉತ್ತರ ಪ್ರದೇಶ ಸಿಎಂ ಅಖಿಲೇಶ್ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ದೆಹಲಿಗೆ ಗುರುವಾರ ಆಗಮಿಸಿ ವಿಚಾರಣೆಗೆ ಹಾಜರಾಗಬೇಕೆಂದು ಅಖಿಲೇಶ್ಗೆ ಸಮನ್ಸ್ನಲ್ಲಿ ಸೂಚಿಸಲಾಗಿದೆ. 2012-2016ರ ಅವಧಿಯಲ್ಲಿ ಹಮೀರ್ಪುರ್ನಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಅಖಿಲೇಶ್ಗೆ ಸೂಚಿಸಲಾಗಿದೆ. ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, INDIA ಒಕ್ಕೂಟ ಬಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಒಡೆಯಲು ಬಿಜೆಪಿ ಮುಂದಾಗುತ್ತಿದೆ. ಈ ಕಾರಣಕ್ಕೆ ಬೇರೆ ಪಕ್ಷದ ನಾಯಕರನ್ನು ಸೆಳೆದು ಅಡ್ಡ ಮತದಾನಕ್ಕೆ ಮುಂದಾಗಿದೆ ಎಂದು ಆರೋಪಿಸಿದರು. ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ 8, ಎಸ್ಪಿ 2 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಸ್ಪಿಯ 7 ಶಾಸಕರು ಅಡ್ಡ ಮತದಾನ ಮಾಡಿದ ಪರಿಣಾಮ ಬಿಜೆಪಿಯ 8ನೇ ಅಭ್ಯರ್ಥಿ ಆರ್ಎಸ್ ಸಂಜಯ್ ಸೇಥ್ ಜಯಗಳಿಸಿದರು.