ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ – ಹೆಚ್‌ಡಿಕೆ

ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರ ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ – ಹೆಚ್‌ಡಿಕೆ

ನವದೆಹಲಿ : ಕೆಂಪೇಗೌಡ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಹೆಸರು ಕೈಬಿಟ್ಟ ವಿಚಾರವನ್ನು ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ, ನಾನು ಯಾವಾಗಲೂ ಸಹ ಯಾವುದೇ ಕಾರ್ಯಕ್ರದಲ್ಲೂ ನನ್ನ ಹೆಸರು ಹಾಕಿಲ್ಲ ಅಂತ ದೂರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ದೆಹಲಿಯಲ್ಲಿ ಈ ಬಗ್ಗೆ ಮಾತನಾಡಿರ ಅವರು, ನಾಡಪ್ರಭು ಕೆಂಪೇಗೌಡರು ಯಾರ ಸ್ವತ್ತು ಅಲ್ಲ, ಅವರು ಕನ್ನಡದ ಸ್ವತ್ತು ನಾಳೆಯ ಸರ್ಕಾರದ ಕಾರ್ಯಕ್ರಮದಲ್ಲಿ ದೇವೇಗೌಡರು, ನನ್ನ ಹೆಸರು ಹಾಕಿಲ್ಲ ಅಂತ ಹೇಳಿದರು ನಾನು ಈ ವಿಚಾರಕ್ಕೆ ಬಹಳ ಮಹತ್ವ ಕೊಡುವುದಿಲ್ಲ ನಾನು ಯಾವಾಗಲೂ ಸಹ ಯಾವುದೇ ಕಾರ್ಯಕ್ರದಲ್ಲೂ ನನ್ನ ಹೆಸರು ಹಾಕಿಲ್ಲ ಅಂತ ಹೇಳುವುದಿಲ್ಲ ಎಂದರು.

ಕೆಂಪೇಗೌಡರ ಜಯಂತಿಯನ್ನ ಬೇರೆ ಬೇರೆ ರೀತಿಯಲ್ಲಿ ಆಚರಣೆ ಮಾಡುತ್ತಾರೆ, ಸರ್ಕಾರ ಒಂದು ರೀತಿಯಲ್ಲಿ ಆಚರಣೆ ಮಾಡಿದರೆ, ದೇವನಹಳ್ಳಿ ಭಾಗದಲ್ಲಿ ಮನೆ ಮನೇಲೂ ಫೋಟೋ ಇಟ್ಟು ಪೂಜೆ ಮಾಡಿ ಆಚರಣೆ ಮಾಡುತ್ತಾರೆ, ಬೆಂಗಳೂರು ನಗರದ ಬಗ್ಗೆ ಇವತ್ತು ವಿಶ್ವದಲ್ಲೇ ಚರ್ಚೆ ಆಗುತ್ತಿದೆ ಅದಕ್ಕೆ ಕಾರಣರಾದವರು ಕೆಂಪೇಗೌಡರು.

ಕೆಂಪೇಗೌಡ ಕಟ್ಟಿರುವ ಕೆರೆಗಳನ್ನ ಈಗಿನ ದಿನಗಳಲ್ಲಿ ಸ್ವಾರ್ಥಕ್ಕೆ ಕೆಲವರು ನುಂಗಿದ್ದಾರೆ ಈಗಲಾದರೂ ಇರುವ ಕೆರೆಗಳನ್ನ ಕಾಪಾಡುವ ಕೆಲಸ ಮಾಡಬೇಕಿದೆ ಮೇಕೆದಾಟು ಕಟ್ಟಬೇಕು, ಕುಡಿಯೋ ನೀರು ಅಂತೆಲ್ಲ ಹೇಳುತ್ತಾರೆ ಈಗಲೇ ಕುಡಿಯೋಕೆ ನೀರಿಲ್ಲದೆ ಕಷ್ಟದ ಪರಿಸ್ಥಿತಿ ಇದೆ ಮುಂದಿನ 15 ವರ್ಷ ಆದಮೇಲೆ ಏನಾಗುತ್ತೋ ಹೊತ್ತಿಲ್ಲ ಸರ್ಕಾರ ನ್ಯಾಯಯುತವಾಗಿ ಜಯಂತಿ ಆಚರಣೆ ಮಾಡೋದಾದರೆ ಆ ಕೆರೆಗಳನ್ನ ರಕ್ಷಣೆ ಮಾಡುವಂತಹ ಕೆಲಸ ಮಾಡಿ ಮಳೆ ನೀರನ್ನ ಸರಿಯಾಗಿ ಬಳಸಿಕೊಳ್ಳುವತ್ತ ಚಿಂತನೆ ಮಾಡಲಿ ಇಷ್ಟು ಮಾಡಿದರೆ ನಾನು ಸರ್ಕಾರಕ್ಕೆ ಸಲ್ಯೂಟ್ ಮಾಡ್ತೇನೆ ಎಂದರು.

ನಾನು ಎರಡು ಬಾರಿ ಮುಖ್ಯಮಂತ್ರಿ ಆದಾಗಲೂ ಸಹ ಆ ನಗರಕ್ಕೆ ಕೊಡುಗೆ ಕೊಟ್ಟಿದ್ದೇನೆ ನಾನು ಕೆಂಪೇಗೌಡರಿಗೆ ಯಾವ ರೀತಿ ಗೌರವ ಸಲ್ಲಿಸಬೇಕು ಅದನ್ನ ಮಾಡುತ್ತೇನೆ ಇವತ್ತು ನನ್ನ ಹೆಸರು ಹಾಕಿದರೂ ನಾಳೆ ನಾನು ಹೋಗಲು ಸಾಧ್ಯವಿಲ್ಲ ನಾಳೆ ರಾಷ್ಟ್ರಪತಿಗಳು ಜಂಟಿ ಭಾಷಣ ಮಾಡುತ್ತಾರೆ ನಾನು ಇಲ್ಲಿ ಇರ್ಬೇಕು, ಅದಕ್ಕೆ ನಾನು ಇಲ್ಲೆ ಗೌರವ ಸಲ್ಲಿಸುತ್ತೇನೆ ಎಂದರು.

Previous Post
ಚನ್ನಪಟ್ಟಣ ಉಪ ಚುನಾವಣೆ ಅಭ್ಯರ್ಥಿ ಆಯ್ಕೆಗೆ ದೆಹಲಿಯಲ್ಲಿ ಕಸರತ್ತು
Next Post
28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ- ಬಿ.ವೈ.ವಿಜಯೇಂದ್ರ

Recent News