ವಾಲ್ಮೀಕಿ ನಿಗಮದಲ್ಲಿ ಅಕ್ರಮ ಸಿಬಿಐನಿಂದ ತನಿಖೆ ತೀವ್ರಗೊಳಿಸಿ – ಅಮಿತ್ ಶಾ ಶೋಭಾ ಕರಂದ್ಲಾಜೆ ಪತ್ರ

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಸಿಬಿಐನಿಂದ ತನಿಖೆ ತೀವ್ರಗೊಳಿಸಿ – ಅಮಿತ್ ಶಾ ಶೋಭಾ ಕರಂದ್ಲಾಜೆ ಪತ್ರ

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳ್ಳಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಅವರು, ಪ್ರಕರಣದಲ್ಲಿ ಯುನಿಯನ್ ಬ್ಯಾಂಕ್ ಶಾಮೀಲಾಗಿದೆ ಎನ್ನಲಾಗಿದೆ ಯೂನಿಯನ್ ಬ್ಯಾಂಕ್ ಮತ್ತು ಇತರೆ ಹಣಕಾಸು ಸಂಸ್ಥೆಗಳ ಪಾತ್ರದ ತನಿಖೆಯಾಗಬೇಕು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಸಮಗ್ರ ತನಿಖೆ ಮಾಡಿಸಿ ಹಗರಣದಲ್ಲಿ ಭಾಗಿಯಾದವನ್ನು ಹೊಣೆಗಾರರನ್ನಾಗಿ ಮಾಡಬೇಕು

ಚಂದ್ರಶೇಖರ್ ಆತ್ಮಹತ್ಯೆಗೆ ಕಾರಣ ಪತ್ತೆಹಚ್ಚಬೇಕು, ಅವರ ಕುಟುಂಬಕ್ಕೆ ನೆರವು ಖಾತ್ರಿಪಡಿಸಬೇಕು, ಭವಿಷ್ಯದಲ್ಲಿ ಇಂತಹ ಕೃತ್ಯಗಳನ್ನು ತಡೆಯಲು ಕ್ರಮವಹಿಸಬೇಕು. ಸರ್ಕಾರದ ವಿವಿಧ ಅಭಿವೃದ್ಧಿ ನಿಧಿಗಳ ಮೇಲ್ವಿಚಾರಣೆ ಮಾಡಬೇಕು ಇದಕ್ಕೆ ಸಂಬಂಧಿಸಿದಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ‌.

Previous Post
ತಮಿಳುನಾಡಿಗೆ ನಿತ್ಯ 1 ಟಿಎಂಸಿ ಹರಿಸಲು CWRC ಶಿಫಾರಸ್ಸು
Next Post
ಅನ್ಯರಾಜ್ಯಗಳ ವಿದ್ಯಾರ್ಥಿಗಳಿಗೆ ಗುಜುರಾತಿಯಲ್ಲಿ ನೀಟ್ ಬರೆಯಲು ಸೂಚನೆ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಬಿಐ ಮಹತ್ವದ ಮಾಹಿತಿ

Recent News