ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸೌಹಾರ್ದ ಭೇಟಿ
ಮಾಡಿದರು
ನವದೆಹಲಿ (ಕರ್ನಾಟಕ ವಾರ್ತೆ) ಜುಲೈ 30 ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಇಂದು ದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ರವರನ್ನು ಸೌಹಾರ್ದಿತವಾಗಿ ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ ಹಾಗೂ ದೆಹಲಿಯ ಕರ್ನಾಟಕ ವಿಶೇಷ ಪ್ರತಿನಿಧಿಗಳಾದ ಡಾ. ಟಿ.ಬಿ.ಜಯಚಂದ್ರ ಅವರು ಉಪಸ್ಥಿತರಿದ್ದರು