ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವವನಲಲ್ಲ , ಇದೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ನಾನು ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗುವವನಲಲ್ಲ , ಇದೆಲ್ಲಾ ನೋಡುತ್ತಾ ಕೈ ಕಟ್ಟಿ ಕೂರುವವನಲ್ಲ: ಸಿ.ಎಂ.ಸಿದ್ದರಾಮಯ್ಯ ಘೋಷಣೆ

ಮೈಸೂರು ಆ 9: ನಾನು ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ಇದ್ದೀನಿ. ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎನ್ನುವ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದಕ್ಕೆ ಈ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ನಂಬಿಕೆ ನನಗಿದೆ ಎಂದರು. ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ಸೇಶದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ. ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಎಚ್ಚರಿಸಿದರು. ರಾಜ್ಯದ ಜೆಡಿಎಸ್ ಹಾಗೂ ಬಿಜೆಪಿ ನಾಯಕರುಗಳು ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಜನ ಬೆಂಬಲವಿರುವ ರಾಜ್ಯ  ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮೈತ್ರಿ ಪಕ್ಷಗಳಿಂದ ಸಾಧ್ಯವಿಲ್ಲ. ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ ರಾಜಕೀಯ ಜೀವನ ನಡೆಸಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಆಸ್ತಿ ಮಾಡುವ ಹುನ್ನಾರ ನಡೆಸಿಲ್ಲ. ಎಲ್ಲಿಯವರೆಗೆ ರಾಜಕೀಯದಲ್ಲಿರುತ್ತೇನೋ ಅಲ್ಲಿಯವರೆಗೆ ಭ್ರಷ್ಟಾಚಾರ ಮಾಡುವುದಿಲ್ಲ. ಜೆಡಿಎಸ್ – ಬಿಜೆಪಿ ಆರೋಪಕ್ಕೆ ಜಗ್ಗುವುದಿಲ್ಲ ಹೆದರುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

Previous Post
ಬುರ್ಕಾ ನಿಷೇಧಿಸಿದ ಕಾಲೇಜು ಆದೇಶಕ್ಕೆ ಸುಪ್ರೀಂ ಮಧ್ಯಂತರ ತಡೆ
Next Post
ವಯನಾಡ್ ಭೂಕುಸಿತ: ಕೇರಳ ಹೈಕೋರ್ಟಿನಿಂದ ಸ್ವಯಂಪ್ರೇರಿತ ವಿಚಾರಣೆ

Recent News