Implementation of several schemes to develop scientific attitude among students:: Minister NS Bhosaraju

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳ ಅನುಷ್ಠಾನ:: ಸಚಿವ ಎನ್‌ ಎಸ್‌ ಭೋಸರಾಜು

– ರಾಷ್ಟ್ರೀಯ ಅಂತರಿಕ್ಷ ದಿನಚಾರಣೆಯ ಕಾರ್ಯಕ್ರಮದಲ್ಲಿ ಭಾಗಿ

– ತಾರಾಲಯದಲ್ಲಿ ಇನ್ನಷ್ಟು ಆಕರ್ಷಣೆ ಹೆಚ್ಚಿಸುವತ್ತ ಕ್ರಮ

– ಜವಾಹರಲಾಲ್‌ ನೆಹರು ತಾರಾಲಯದಲ್ಲಿ ಆಕರ್ಷಣೆಯನ್ನು ಇಮ್ಮಡಿಗೊಳಿಸಲಿರುವ ಆದಿತ್ಯ ಎಲ್‌-1 ಉಪಗ್ರಹದ ನೈಜ ಪ್ರತಿರೂಪ

Implementation of several schemes to develop scientific attitude among students:: Minister NS Bhosaraju
Implementation of several schemes to develop scientific attitude among students:: Minister NS Bhosaraju

ಬೆಂಗಳೂರು ಆಗಸ್ಟ್‌ 23 : ರಾಜ್ಯದ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವಿಜ್ಞಾನದ ಬಗ್ಗೆ ಆಸಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಟಾನಗೊಳಿಸುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದರು . ಇಂದು ಜವಾಹರಲಾಲ್‌ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ಅಂತರಿಕ್ಷ ದಿನಾಚರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತದ ತಾಂತ್ರಿಕ ಸಾಮರ್ಥ್ಯವನ್ನ ಇಡೀ ಜಗತ್ತಿಗೆ ಸಾರಿ ಹೇಳಿದ ಈ ದಿನವನ್ನು “ರಾಷ್ಟ್ರೀಯ ಅಂತರಿಕ್ಷ ದಿನ” ಎಂದು ಆಚರಿಸಲಾಗುತ್ತಿದೆ. ಚಂದ್ರನ ದಕ್ಷಿಣ ದ್ರುವ ಪ್ರದೇಶದ ಮೇಲೆ ನೌಕೆಯನ್ನು ಇಳಿಸಿದ ಮೊದಲ ದೇಶ ಎನ್ನುವ ಹೆಗ್ಗಳಿಕೆ ಪಾತ್ರವಾಗುವ ಮೂಲಕ, ಲಕ್ಷಾಂತರ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಅಂತರಿಕ್ಷ ಕ್ಷೇತ್ರದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದುವಂತೆ ಪ್ರೇರೇಪಿಸಿದೆ. ಇಸ್ರೋ 100 ಕ್ಕೂ ಹೆಚ್ಚು ಉಪಗ್ರಹಗಳನ್ನು ಕಳುಹಿಸಿರುವ ಇಸ್ರೋ, ಚಂದ್ರಯಾನ – 1,2 ಮತ್ತು 3 ರ ಮೂಲಕ ವಿಶ್ವದ ಅಂತರಿಕ್ಷ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷ ಮೈಲುಗಲ್ಲನ್ನ ನೆಟ್ಟಿದೆ ಎಂದರು.

ರಾಜ್ಯದ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೆಚ್ಚಿಸಲು, ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನಮ್ಮ ಸರಕಾರ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ರಾಜ್ಯದ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್‌ಗಳನ್ನು ಒದಗಿಸುತ್ತಿದ್ದೇವೆ. ಇದರಿಂದ ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನ ಹಾಗೂ ಅರ್ಥ ಮಾಡಿಕೊಳ್ಳುವ ಶಕ್ತಿ ಇನ್ನಷ್ಟು ಮೊನಚಾಗುತ್ತದೆ. ಜವಾಹರಲಾಲ್‌ ನೆಹರು ತಾರಾಲಯದ ಆವರಣವನ್ನು ಇನ್ನಷ್ಟು ಆಕರ್ಷಕಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಸೂರ್ಯನ ಅಧ್ಯಯನಕ್ಕೆ ತೆರಳಿರುವ ಆದಿತ್ಯ ಎಲ್‌ 1 ಉಪಗ್ರಹದ ನೈಜ ಗಾತ್ರದ ಪ್ರತಿರೂಪವನ್ನು ತಾರಾಲಯದ ಆವರಣದಲ್ಲಿ ಅಳವಡಿಸಲಿದ್ದೇವೆ. ಇಸ್ರೋ ಸಂಸ್ಥೆಯ ಜೊತೆ ಈಗಾಗಲೇ ತಾರಾಲಯದ ಅಧಿಕಾರಿಗಳು ಮಾತುಕತೆ ನಡೆಸಿದ್ದು, ತಾರಾಲಯದ ಆವರಣದಲ್ಲಿ ಜಾಗವನ್ನು ಸಿದ್ದಗೊಳಿಸಿದ ನಂತರ ಇದನ್ನು ತರಲಾಗುವುದು. ಇದು ತಾರಾಲಯದ ಆಕರ್ಷಣೆಯನ್ನು ಇಮ್ಮಡಿಗೊಳಿಸಲಿದೆ ಎಂದರು.

ತಾರಾಲಯದ ಆವರಣದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಭೋಧನಾ ಕೊಠಡಿಗಳು, ಆಡಿಯೋ, ವಿಡಿಯೋ ವಿಷ್ಯೂಯಲ್‌ ಸಲಕರಣೆಗಳನ್ನು ಅಳವಡಿಸಿರುವ ಕಟ್ಟಡದ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದಿನ ತಿಂಗಳು ಇದರ ಉದ್ಘಾಟನೆ ಮಾಡಿಸುವ ನಿಟ್ಟಿನಲ್ಲಿ ಅಗತ್ಯ ತಯಾರಿಯನ್ನು ನಡೆಸಲಾಗಿದೆ. ವಿದ್ಯಾರ್ಥಿಗಳು ವಿಜ್ಞಾನವನ್ನು ಚಟುವಟಿಕೆಯ ಮೂಲಕ ಕಲಿಯಲು ಅನುವು ಮಾಡಿಕೊಡುವ ಸ್ಟ್ರೀಮ್‌ ಲ್ಯಾಬ್ ಗಳ ಪ್ರಾರಂಭಕ್ಕೂ ನಮ್ಮ ಇಲಾಖೆಯ ವತಿಯಿಂದ ಯೋಜನೆಯನ್ನು ರೂಪಿಸಲಾಗುತ್ತಿದೆ. ಹೊಸ ಯೋಜನೆಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲು ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ನೇತೃತ್ವದ ನಮ್ಮ ಸರಕಾರ ಸಿದ್ದವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್‌ ಅರ್ಷದ್‌, ಬೆಂಗಳೂರು ಅಸೋಸಿಯೇಷನ್‌ ಫಾರ್‌ ಸೈನ್ಸ್‌ ಎಜುಕೇಷನ್‌ ಉಪಾಧ್ಯಕ್ಷರಾದ ಡಾ. ಟಿ.ಕೆ ಆಲೆಕ್ಸ್‌, ಜವಾಹರಲಾಲ್‌ ನೆಹರು ತಾರಾಲಯದ ನಿರ್ದೇಶಕರಾದ ಡಾ. ಗುರುಪ್ರಸಾದ್‌ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Previous Post
ರಾಜ್ಯದಲ್ಲಿ  ಮಂಕಿ ಫಾಕ್ಸ್  ಆತಂಕ ಬೇಡ: ಸಚಿವ ಶರಣಪ್ರಕಾಶ್‌ ಪಾಟೀಲ್‌
Next Post
ಕಾನೂನಿನ ಪ್ರಕಾರವೇ ಜಿಂದಾಲ್ ಗೆ ಜಮೀನು: ಎಂ ಬಿ ಪಾಟೀಲ

Recent News