ನಿಮ್ಮ ಹೃದಯ ಗೆಲ್ಲಲು ನಾನು ಇಲ್ಲಿಗೆ ಬಂದಿದ್ದೇನೆ ಜಮ್ಮು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ

ನಿಮ್ಮ ಹೃದಯ ಗೆಲ್ಲಲು ನಾನು ಇಲ್ಲಿಗೆ ಬಂದಿದ್ದೇನೆ ಜಮ್ಮು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ

ನವದೆಹಲಿ : ಲೋಕಸಭೆ ಚುನಾವಣೆಗೂ ಮುನ್ನ ವಿವಿಧ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದರು. ಆರ್ಟಿಕಲ್ 370 ರದ್ದಿನ ಬಳಿಕ ಮೊದಲ ಬಾರಿಗೆ ಭೇಟಿ ನೀಡಿದ ಅವರು 6400 ಮೌಲ್ಯದ 53 ಯೋಜನೆಗಳಿಗೆ ಚಾಲನೆ ನೀಡಿದರು. ಬಕ್ಷಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರಿಗೆ ನೇಮಕಾತಿ ಪತ್ರ ವಿತರಿಸಿದರು‌.

ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಶ್ರೀನಗರದ ಅದ್ಭುತ ಜನರಲ್ಲಿ ಒಬ್ಬರಾಗಿರುವುದಕ್ಕೆ ನಾನು ಉತ್ಸುಕನಾಗಿದ್ದೇನೆ, ನಿಮ್ಮ ಹೃದಯ ಗೆಲ್ಲಲ್ಲು ನಾನು ಇಲ್ಲಿಗೆ ಬಂದಿದ್ದೇನೆ, ಇಂದು ಸಮರ್ಪಿಸಲಾಗುತ್ತಿರುವ ಅಭಿವೃದ್ಧಿ ಯೋಜನೆಗಳು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಉತ್ತೇಜನ ನೀಡುತ್ತವೆ. ಅಭಿವೃದ್ಧಿ ಹೊಂದಿದ ಭಾರತಕ್ಕೆ ಅಭಿವೃದ್ಧಿ ಹೊಂದಿದ ಜಮ್ಮು ಮತ್ತು ಕಾಶ್ಮೀರ ಆದ್ಯತೆ ಎಂದರು.

ಜಮ್ಮು ಮತ್ತು ಕಾಶ್ಮೀರದ ಜನರು ಪ್ರಯೋಜನಗಳಿಂದ ವಂಚಿತರಾದ ಯುಗವೂ ಇತ್ತು, ದೇಶದ ಇತರ ಭಾಗಗಳಲ್ಲಿ ಜಾರಿಗೊಳಿಸಲಾದ ಕಾನೂನನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಗೊಳಿಸಲು ಸಾಧ್ಯವಾಗದ ಯುಗವಿತ್ತು, ದೇಶಾದ್ಯಂತ ಬಡವರ ಕಲ್ಯಾಣಕ್ಕಾಗಿ ಯೋಜನೆಗಳನ್ನು ಜಾರಿಗೊಳಿಸಿದಾಗ, ಆದರೆ ಜಮ್ಮು ಮತ್ತು ಕಾಶ್ಮೀರದ ನಮ್ಮ ಸಹೋದರ ಸಹೋದರಿಯರು ವಂಚಿತರಾಗಿದ್ದರು. ಈಗ ನೋಡಿ ಸಮಯ ಹೇಗೆ ಬದಲಾಗಿದೆ. ಕಾಂಗ್ರೆಸ್ ಕೇವಲ ಜಮ್ಮು ಮತ್ತು ಕಾಶ್ಮೀರದ ಜನರನ್ನು ಮಾತ್ರವಲ್ಲದೆ ಇಡೀ ದೇಶವನ್ನು 370 ನೇ ವಿಧಿಯ ಬಗ್ಗೆ ತಪ್ಪುದಾರಿಗೆಳೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇಂದು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ನನಗೆ ಅವಕಾಶ ಸಿಕ್ಕಿದೆ. ಅಭಿವೃದ್ಧಿಯ ಶಕ್ತಿ, ಪ್ರವಾಸೋದ್ಯಮ ಸಾಧ್ಯತೆಗಳು, ರೈತರ ಸಬಲೀಕರಣ ಮತ್ತು ಜಮ್ಮು ಮತ್ತು ಕಾಶ್ಮೀರದ ಯುವಕರ ನಾಯಕತ್ವ ಹೆಚ್ಚಿಸಲಿದೆ. ಜಮ್ಮು ಮತ್ತು ಕಾಶ್ಮೀರ ಕೇವಲ ಒಂದು ಪ್ರದೇಶವಲ್ಲ, ಅದು ಭಾರತದ ಹಣೆಬರಹ, ವಿಕ್ಷಿತ್ ಜಮ್ಮು ಮತ್ತು ಕಾಶ್ಮೀರವು ವಿಕ್ಷಿತ್ ಭಾರತ್‌ನ ಆದ್ಯತೆಯಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ 285 ಬ್ಲಾಕ್‌ಗಳಿಂದ 1 ಲಕ್ಷ ಜನರು ವಾಸ್ತವಿಕವಾಗಿ ನಮ್ಮೊಂದಿಗೆ ಸೇರಿಕೊಂಡಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ನಾನು ಜಮ್ಮು ಮತ್ತು ಕಾಶ್ಮೀರದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಹೊಸ ಜಮ್ಮು ಮತ್ತು ಕಾಶ್ಮೀರಕ್ಕೆ ಉಜ್ವಲ ಭವಿಷ್ಯವಿದೆ ಮತ್ತು ಸವಾಲುಗಳನ್ನು ಜಯಿಸುವ ಧೈರ್ಯವಿದೆ. ನಿಮ್ಮ ಸಂತೋಷದ ಮುಖಗಳನ್ನು ನೋಡಿ, ದೇಶಾದ್ಯಂತ 140 ಕೋಟಿ ಜನರು ಸಂತೃಪ್ತಿ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದರು

ಇದಕ್ಕೂ ಮುನ್ನ ಪ್ರಧಾನಿಯವರು ಹೊಸದಾಗಿ ನೇಮಕಗೊಂಡ ಸುಮಾರು 1,000 ಸರ್ಕಾರಿ ನೌಕರರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು ಮತ್ತು ಮಹಿಳಾ ಸಾಧಕರು, ರೈತರು ಮತ್ತು ಉದ್ಯಮಿಗಳು ಸೇರಿದಂತೆ ವಿವಿಧ ಕೇಂದ್ರ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

Previous Post
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 5 ಗ್ಯಾರಂಟಿ
Next Post
ಪ್ರತಿಭಟನೆಯಲ್ಲಿ ಯುವ ರೈತನ ಸಾವು ನ್ಯಾಯಂಗ ತನಿಖೆಗೆ ಆದೇಶಿಸಿದ ಹೈಕೋರ್ಟ್

Recent News