“ಹೆದರಬೇಡಿ, ಹೆದರಿ ಓಡಬೇಡಿ” ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ ಮೋದಿ

“ಹೆದರಬೇಡಿ, ಹೆದರಿ ಓಡಬೇಡಿ” ರಾಹುಲ್ ಗಾಂಧಿ ವ್ಯಂಗ್ಯ ಮಾಡಿದ ಮೋದಿ

ನವದೆಹಲಿ : ಕೇರಳದ ವಯನಾಡಿನಲ್ಲಿ ಚುನಾವಣೆ ಬಳಿಕ ರಾಹುಲ್ ಗಾಂಧಿ ಬೇರೇಡೆ ಮುಖ ಮಾಡಲಿದ್ದಾರೆ ಎಂದು ನಾನು ಮೊದಲೇ ಹೇಳಿದ್ದೆ ಈಗ ಅಮೇಥಿಯಲ್ಲೂ ಸೋಲಿನ ಭಯ ಕಂಡಿರುವ ಅವರು ರಾಯ್ ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಂಗ್ಯ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಬರ್ಧಮಾನ್-ದುರ್ಗಾಪುರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ವಯನಾಡಿನಲ್ಲಿ ಸೋಲಿನ ಬಗ್ಗೆ ತಿಳಿದಿರುವ ರಾಹುಲ್ ಗಾಂಧಿ ಮತ್ತೊಂದು ಕ್ಷೇತ್ರಕ್ಕೆ‌ ಹೋಗಿದ್ದಾರೆ. ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳಿದರು ಆದರೆ ಅವರು ಆಯ್ಕೆ ಮಾಡಿಕೊಂಡಿರುವುದು ಯಾವ ಕ್ಷೇತ್ರ ರಾಯಬರೇಲಿ, ಅಮೇಥಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡೊಕೆ ರಾಹುಲ್ ಗೆ ಭಯ ಹೀಗಿದ್ದರೂ ಸಹ ರಾಹುಲ್ ಗಾಂಧಿ ಹೇಳೋದು ಹೆದರಬೇಡಿ ಅಂತಾ, ನಾನು ರಾಹುಲ್ ಗಾಂಧಿಗೆ ಹೇಳುತ್ತೇನೆ ಹೆದರಬೇಡಿ, ಓಡಿ ಹೋಗಬೇಡಿ ಎಂದು ಕುಟುಕಿದರು.

ಗಾಂಧಿ ಕುಟುಂಬದ ನಡೆದಿಂದ ಚುನಾವಣಾ ಫಲಿತಾಂಶ ಸ್ಪಷ್ಟವಾಗಿದೆ, ಯಾವುದೇ ಸಮೀಕ್ಷೆ ನಡೆಸುವ ಅಗತ್ಯ ಇಲ್ಲ. ಕಾಂಗ್ರೇಸ್ ಮೊದಲೇ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದೆ, ಕಳೆದ ಬಾರಿಯಷ್ಟು ಸ್ಥಾನಗಳು ಈ ಬಾರಿ ಕಾಂಗ್ರೇಸ್‌ಗೆ ಸಿಗುವುದಿಲ್ಲ ಎಂದು ಹೊಸ ಸವಾಲು ಹಾಕಿದರು.

ಸಂವಿಧಾನವನ್ನು ಬದಲಾಯಿಸಿ ದಲಿತ ಮತ್ತು ಇತರ ಹಿಂದುಳಿದ ವರ್ಗಗಳ (ಒಬಿಸಿ) ಕೋಟಾಗಳನ್ನು ಕಸಿದುಕೊಂಡು ‘ಜಿಹಾದಿ’ ವೋಟ್ ಬ್ಯಾಂಕ್‌ಗೆ ಮೀಸಲಾತಿ ನೀಡಲು ಕಾಂಗ್ರೆಸ್ ಬಯಸಿದೆ” ಅವರಿಗೆ (ವಿರೋಧ ಪಕ್ಷಗಳಿಗೆ ) ಅಭಿವೃದ್ಧಿಯನ್ನು ತರಲು ಸಾಧ್ಯವಿಲ್ಲ, ಅವರಿಗೆ ಮತಕ್ಕಾಗಿ ಸಮಾಜವನ್ನು ವಿಭಜಿಸುವುದು ಹೇಗೆ ಎಂದು ತಿಳಿದಿದೆ ಎಂದು ವಾಗ್ದಾಳಿ ನಡೆಸಿದರು.

ತೃಣಮೂಲ ಶಾಸಕ ಹುಮಾಯೂನ್ ಕಬೀರ್ ಅವರನ್ನು ಉಲ್ಲೇಖಿಸಿದ ಪ್ರಧಾನಿ, ಟಿಎಂಸಿ ಶಾಸಕರೊಬ್ಬರು ಬಹಿರಂಗ ಬೆದರಿಕೆ ಹಾಕಿದರು. ಅವರು ಕೇವಲ ಎರಡು ಗಂಟೆಗಳಲ್ಲಿ ಭಾಗೀರಥಿಯಲ್ಲಿ ಹಿಂದೂಗಳನ್ನು ಮುಳುಗಿಸುತ್ತಾರೆ ಎಂದು ಹೇಳಿದರು. ಇದು ಏನು ಭಾಷೆ? ಇದು ಯಾವ ರಾಜಕೀಯ ಸಂಸ್ಕೃತಿ? ಬಂಗಾಳದಲ್ಲಿ ಹಿಂದೂಗಳಿಗೆ ಏನಾಗುತ್ತಿದೆ? ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಹಿಂದೂಗಳನ್ನು ಎರಡನೇ ಪ್ರಜೆಯನ್ನಾಗಿ ಮಾಡಿದೆ ಎಂದು ತೋರುತ್ತಿದೆ ಎಂದರು.

ಎಡಪಕ್ಷಗಳು, ತೃಣಮೂಲ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿಯ ದೃಷ್ಟಿ ಇಲ್ಲ, ಎಡಪಕ್ಷಗಳು ತ್ರಿಪುರಾವನ್ನು ಸಂಪೂರ್ಣವಾಗಿ ನಾಶಪಡಿಸಿದರು ಅವರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದರು. ಕಳೆದ ಐದು ವರ್ಷಗಳಲ್ಲಿ ಬಿಜೆಪಿ ತ್ರಿಪುರವನ್ನು ಸಂಪೂರ್ಣವಾಗಿ ಬದಲಾಯಿಸಿದೆ. ನಿಮ್ಮ ಕನಸುಗಳನ್ನು ನನಸಾಗಿಸುವುದು ನನ್ನ ಕನಸು, ನಿಮ್ಮೆಲ್ಲರಿಗೂ ಮತ್ತು ದೇಶಕ್ಕೂ ಸೇವೆ ಸಲ್ಲಿಸಲು ನನಗೆ ಆಶೀರ್ವಾದಿಸಬೇಕು. ನನ್ನ ಬಳಿ ಏನೂ ಇಲ್ಲ ನೀವೆಲ್ಲರೂ ಕುಟುಂಬದವರು, ನಿಮ್ಮಗಾಗಿ ನಿಮ್ಮ ಮಕ್ಕಳಿಗಾಗಿ ಮಾತ್ರ ಕೆಲಸ ಮಾಡುತ್ತೇನೆ ಎಂದರು‌.

Previous Post
ಗಾಂಧಿ ಕುಟುಂಬದ ಭದ್ರಕೋಟೆ ರಾಯ್ ಬರೇಲಿ
Next Post
ನರೇಂದ್ರ ಮೋದಿಯವರು ಒಬ್ಬ ಒಳ್ಳೆಯ ನಾಟಕಕಾರ, ಇವೆಂಟ್ ಮ್ಯಾನೇಜರ್ ಅಷ್ಟೇ: ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

Recent News